Friday, December 26, 2025
Friday, December 26, 2025

S.N.Chennabasappa ದ್ವೇ಼ಷ ಭಾಷಣ ಪ್ರತಿಬಂಧಕ ವಿಧೇಯಕವು ಸಂವಿಧಾನ ವಿರೋಧಿ- ಶಾಸಕ ಎಸ್.ಎನ್.ಚನ್ನಬಸಪ್ಪ

Date:

S.N.Chennabasappa ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತರುತ್ತಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿದೇಯಕ-2025’ ಕೇವಲ ಒಂದು ವರ್ಗದ ಓಲೈಕೆಗಾಗಿ ರೂಪಿಸಿರುವ ಕರಾಳ ಕಾನೂನಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಜನಾಗ್ರಹ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾನ್ಯ ರಾಜ್ಯಪಾಲರಿಗೆ ಈ ಕೂಡಲೇ ಈ ವಿದೇಯಕವನ್ನು ತಡೆಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

S.N.Chennabasappa ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಗ್ರಾಮಾಂತರ ಅಧ್ಯಕ್ಷರಾದ ಶ್ರೀ ಸಿಂಗನಹಳ್ಳಿ ಸುರೇಶ್, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯ್ಕ್ ಸೇರಿದಂತೆ ಜಿಲ್ಲಾ ಹಾಗೂ ನಗರದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ...

S.N.Chennabasappa ಶಿವಮೊಗ್ಗದ 31 ನೇ ವಾರ್ಡಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಚೆನ್ನಿ

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 31ರ...

Backward Classes Welfare Department ಪಿ ಹೆಚ್ ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ ಫೆಲೋಷಿಪ್ ಗಾಗಿ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...