Thursday, September 10, 2026
Thursday, September 10, 2026

B.Y. Raghavendra ಬ್ಯಾಂಕ್ ಗಳು ಮೂಲಕ ಜಾರಿಯಾಗುವ ಕೇಂದ್ರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಬಿ.ವೈ.ರಾಘವೇಂದ್ರ

Date:

B.Y. Raghavendra ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಸಲಹಾ ಸಮಿತಿ’ ಹಾಗೂ ‘ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದರು.

ಜಿಲ್ಲೆಯ ಬ್ಯಾಂಕಿಂಗ್ ಮತ್ತು ಆರ್ಥಿಕ ಪ್ರಗತಿಯ ಪರಿಶೀಲನೆ ನಡೆಸಲಾಯಿತು.

ಆರ್ಥಿಕ ಒಳಗೊಳ್ಳುವಿಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಪಿ.ಎಂ. ಸ್ವನಿಧಿ, ಮುದ್ರಾ ಯೋಜನೆ, ಪಿ.ಎಂ. ವಿಶ್ವಕರ್ಮ ಹಾಗೂ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್‌ನಂತಹ ಮಹತ್ವಾಕಾಂಕ್ಷಿ ಯೋಜನೆಗಳು ಕೇವಲ ಅಂಕಿ ಅಂಶಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಪ್ರಧಾನಿಯವರ ವಿಶೇಷ ಕಾಳಜಿಯಾಗಿದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ, ಸಾಲ ಸೌಲಭ್ಯ ಕೋರಿ ಬರುವ ಜನಸಾಮಾನ್ಯರಿಗೆ, ರೈತರಿಗೆ ಹಾಗೂ ಉದ್ಯಮಿಗಳಿಗೆ ಅನಗತ್ಯ ಅಲೆದಾಟ ತಪ್ಪಿಸಬೇಕು. ಬ್ಯಾಂಕ್ ಅಧಿಕಾರಿಗಳು ವಿಳಂಬ ಧೋರಣೆಯನ್ನು ತೋರದೆ, ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಜನರ ಆರ್ಥಿಕ ಅಭಿವೃದ್ಧಿಗೆ ಸಹಕರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

B.Y. Raghavendra ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿವಿಧ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...