Thursday, May 28, 2026
Thursday, May 28, 2026

Shimoga News ಇನಾಂ ವೀರಾಪುರ ಮರ್ಯಾದಾ ಹತ್ಯೆ: ದಲಿತ ಮುಖಂಡರಿಂದ ಖಂಡನೆ

Date:

Shimoga News ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಇಡೀ ನಾಗರೀಕ ಸಮಾಜ ತಲೆಭಾಗುವಂತಾಗಿದ್ದು, ಅಪರಾಧಿಗಳಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ದಲಿತ ಸಮಾಜದ ಯುವ ಮುಖಂಡ ಅಭಿಲಾಷ್ ಹುರಳಿಕೊಪ್ಪ ಒತ್ತಾಯ ಮಾಡಿದ್ದಾರೆ.

ಮಾನ್ಯ ಪಾಟೀಲ ಎಂಬ ಯುವತಿ ಅನ್ಯ ಜಾತಿಯ ಹುಡುಗನ ಜೊತೆ ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ, ಹುಡುಗನ ಕುಟುಂಬದವರ ಮೇಲೂ ಹಲ್ಲೇ ನಡೆಸಿರುವ ಪ್ರಕರಣ ತಿಳಿದುಬಂದಿದೆ. ಇಂತಹ ಅಮಾನವೀಯ ಘಟನೆಗಳು ಕರ್ನಾಟಕದಲ್ಲಿ ನೂರಾರು ನಡೆದಿವೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

Shimoga News ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು‌ ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು ಮರ್ಯಾದ ಹತ್ಯೆ ಘಟನೆಗಳು ಜರುಗಿವೆ. ಇವು ಕೇವಲ ವರದಿಯಾಗಿರುವ ಪ್ರಕರಣಗಳು, ವರದಿಯಾಗದ ಪ್ರಕರಣಗಳು ಅದೆಷ್ಟೋ ಇದ್ದಾವೋ ತಿಳಿಯದು. ಕೂಡಲೇ ಹಂತಕರನ್ನು ಬಂಧಿಸುವ ಜೊತೆಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

High Court ಶಿವಮೊಗ್ಗದಲ್ಲೇ ಹೈಕೊರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲಿ- ಡಿ.ಜಿ.ನಾಗರಾಜ್.

High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ...

Gruhalakshmi Yojana ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿಯಿರುವ ಪ್ರಕರಣತಕ್ಷಣ ಇತ್ಯರ್ಥ ಪಡಿಸಿ- ಎಚ್.ಎಂ.ಮಧು.

Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ...

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ...