Thursday, March 19, 2026
Thursday, March 19, 2026

Shimoga News ಸಿಎಸ್ಆರ್, ನಿಧಿಯಿಂದ ಖಾಸಗಿ ಕಂಪನಿಗಳು ಸರ್ಕಾರಿ ಶಾಲೆಗಳನ್ನ ಸುಧಾರಿಸಲಿ- ಭಗವಂತರಾವ್.

Date:

Shimoga News ಗ್ರಾಮೀಣ ಪ್ರದೇಶ ಮಕ್ಕಳು ಕೀಳರಿಮೆಯಿಂದ ಹೊರಬರಲು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಅಗತ್ಯ ಎಂದು ಜಿಲ್ಲಾ ಸರ್ವೋದಯ ಮಂಡಳಿ ಮಾಜಿ ಅಧ್ಯಕ್ಷ ಭಗವಂತ ರಾವ್ ಹೇಳಿದರು.

ಕರ್ನಾಟಕ ಸರ್ವೋದಯ ಮಂಡಲ ಶಿವಮೊಗ್ಗ ಜಿಲ್ಲಾ ಘಟಕ ರಾಜ್ಯಾದ್ಯಂತ ಎಲ್ಲ ಶಾಲಾ ಕಾಲೇಜುಗಳು ಹಾಗೂ ಸಮುದಾಯ ಸಂಸ್ಥೆಗಳಲ್ಲಿ ಹಮ್ಮಿಕೊಳ್ಳುತ್ತಿರುವ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ ಭಾಷಣ ಸ್ಪರ್ಧೆ ಕಾರ್ಯಕ್ರಮದ ಅಂಗವಾಗಿ ಮಾಚೇನಹಳ್ಳಿಯ ತುಂಗಾಭದ್ರಾ ಪ್ರೌಢಶಾಲೆ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಖಾಸಗಿ ಕಂಪನಿಗಳು ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನಿಧಿಯನ್ನು ಸರ್ಕಾರಿಗಳ ಶಾಲೆಗಳ ಸುಧಾರಣೆಗೆ ಬಳಸುವ ಅಗತ್ಯವಿದೆ ಎಂದು ತಿಳಿಸಿದರು.

ಎಲ್ಲಾ ವೃತ್ತಿಗಳು ಸಮಾನ ಮೌಲ್ಯ ಹೊಂದಿವೆ. ಶ್ರಮದಾಯಕ ಜೀವನವು ಬದುಕಲು ಯೋಗ್ಯವಾದ ಜೀವನವಾಗಿದೆ. ಸರ್ಕಾರದ ಪ್ರಗತಿಯ ಪ್ರಯೋಜನಗಳು ಸಮಾಜದ ಬಡಜನರಿಗೆ ತಲುಪಬೇಕು. ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಸಮಾಜವನ್ನು ಸುಧಾರಿಸಲು ಮತ್ತು ಕಂಪನಿಗಳಿಗೆ ಸಕಾರಾತ್ಮಕ ಇಮೇಜ್ ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಸೋಮಶೇಖರ್, ಸರ್ವೋದಯ ಮಂಡಳಿ ಉದ್ಡೇಶ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಅಹಿಂಸೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಕಲ್ಯಾಣ ಸಾಧಿಸುವುದು. ಗಾಂಧಿ ಆದರ್ಶಗಳು ಮರೆಯಾಗುತ್ತಿರುವ ಆಗುತ್ತಿರುವ ಈ ಸಂದಂರ್ಭದಲ್ಲಿ ಮಕ್ಕಳಲ್ಲಿ ಗಾಂಧೀಜಿ ಅವರ ಸರ್ವೋದಯ ತತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಉಪಯುಕ್ತ ಎಂದರು.

Shimoga News ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಮಹಾತ್ಮಾ ಗಾಂಧಿ ಅವರ ಸತ್ಯ, ಶಾಂತಿ ಮತ್ತು ಸರಳತೆ, ಅಹಿಂಸೆ, ಸ್ವರಾಜ್ಯ ಮತ್ತು ಸ್ವದೇಶಿ ಬೋಧನೆಗಳ ಮೂಲಕ ಬದುಕಲು ಶಾಲಾ ಮಕ್ಕಳನ್ನು ಪ್ರೇರೇಪಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಶಾಲೆಗೆ ಕುರ್ಚಿ ಮಕ್ಕಳಿಗೆ, ಪುಸ್ತಕ, ಲೇಖನ ಸಾಮಗ್ರಿ ವಿತರಿಸಲಾಯಿತು. ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಆರ್.ಮನೋಹರ್, ಖಜಾಂಚಿ ರುದ್ರಪ್ಪ, ಸದಸ್ಯರುಗಳು, ತುಂಗಾಭದ್ರಾ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಿದ್ದೇಶ್ವರಪ್ಪ, ಸಂತೋಷ್ ಕುಮಾರ್, ಶಿಕ್ಷಕರು ಉಪಸ್ಥಿತರಿದ್ದರು. ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...