Friday, March 20, 2026
Friday, March 20, 2026

Sri Sri Prasannanatha Swamiji ಕೇವಲ ಅಂಕಗಳಿಗೆ ಓದಿನ ಉದ್ದೇಶವಾಗುವುದು ಬೇಡ. ಸಂಸ್ಕೃತಿ – ಸಂಸ್ಕಾರದ ಅರಿವಿರಲಿ-ಶ್ರೀ ಪ್ರಸನ್ನನಾಥಶ್ರೀ.

Date:

Sri Sri Prasannanatha Swamiji ಕೇವಲ ಅಂಕಗಳಿಗೋಸ್ಕರ ಓದುವುದು ಬೇಡ, ಅದರ ಜೊತೆಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವನ್ನು ಹೊಂದುವುದು ಮುಖ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಪ್ರಸನ್ನನಾಥಸ್ವಾಮೀಜಿ ಅಭಿಪ್ರಾಯ ಪಟ್ಟರು.
ಅವರು ಶಿವಮೊಗ್ಗ ಗುರುಪುರ ಹೊರ ವಲಯದ ಬಿಜಿಎಸ್ ಶಾಲಾ-ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಪೋಷಕರು ಹೇಳುವಂತಹ ಮಾತನ್ನು ಪಾಲಿಸಿದಾಗ ಉತ್ತಮ ಭವಿಷ್ಯವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು.ಓದುವಾಗ ಏಕಾಗ್ರತೆ ಹೆಚ್ಚಲು ತನಗೆ ತಾನೆ ಸಕಾರತ್ಮಾಕವಾದ ಅಂಶಗಳನ್ನು ಹೇಳಿಕೊಂಡು ಓದಲು ಕೂರುವ ಮುನ್ನ ಎಲ್ಲವನ್ನು ಬಳೆಯಲ್ಲಿರಿಸಿಕೊಂಡು ಒಂದೆಡೆ ಏಕಾಗ್ರತೆಯಿಂದ ಕೂತು ಕಲಿಯಲು ಪ್ರಯತ್ನಿಸಬೇಕು.
ಪರೀಕ್ಷೆಯ ಸಮಯದಲ್ಲಾಗಲಿ ಇತರ ದಿನಗಳಲ್ಲಾಗಲಿ, ವಿದ್ಯಾರ್ಥಿ 8 ಗಂಟೆಗಳ ನಿದ್ರೆ ಅತ್ಯಾವಶ್ಯಕ, ಪರೀಕ್ಷೆಯ ಸಮಯದಲ್ಲಿ ಓದಿನ ಜೊತೆಗೆ ನಿದ್ರೆಯೂ ಇರಬೇಕು. ಪೋಷಕರು ಮಕ್ಕಳನ್ನು ವಿನಾಕಾರಣ ದೂಷಿಸುವುದಾಗಲಿ, ಮತ್ತೊಬ್ಬರೊಡನೆ ಹೋಲಿಸಿ ಶಿಕ್ಷಿಸುವುದಾಗಲಿ ಮಾಡಬಾರದು ಎಂದು ಕಿವಿಮಾತು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಗುರುಗಳಿದ್ದಾಗ ಮಾತ್ರ ಗುರಿ ತಲುಪಲು ಸಾಧ್ಯ,ನಮ್ಮ ಧರ್ಮ ಒಂದು ಮಹತ್ತರ ಮೈಲಿಗಲ್ಲನ್ನು ತಲುಪಿದೆ ಎಂದು ತಿಳಿಸಿದರು.
ಶ್ರೀ ಆದಿಚುಂಚನಗಿರಿ ವಿದ್ಯಾ ಸಂಸ್ಥೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 450ಕ್ಕೂ ಹೆಚ್ಚು ಎಲ್ಲಾ ಬಗೆಯ ಶಾಲಾ ಕಾಲೇಜುಗಳನ್ನು ನಡೆಸುತ್ತಿದ್ದು, ಸುಮಾರು ಒಂದು ಲಕ್ಷ ನಲವತ್ತು ಸಾವಿರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ವಿಷಯ ತಿಳಿದು ಸಂತೋಷವಾಯಿತು. ಸರ್ಕಾರ ಮಾಡಬೇಕಾದ ಕಾರ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಗುರುಗಳು ಮಾಡುತ್ತಿದ್ದಾರೆ. ನಿಜಕ್ಕೂ ಈ ವಿಷಯದಲ್ಲಿ ನಾವು ಧನ್ಯರು ಎಂದರು.ನಮ್ಮ ಮಕ್ಕಳಿಗೆ ಹಾಗೂ ಸಮಾಜಕ್ಕೆ ಬೇಕಾಗುವ ಒಂದು ಒಳ್ಳೆಯ ಸಂಸ್ಕೃತಿ, ಸಂಸ್ಕಾರ,ಆತ್ಮವಿಶ್ವಾಸ ಅದನ್ನು ನಿರಂತರವಾಗಿ ಸಮಾಜಕ್ಕೆ ಕೊಡುಗೆಯಾಗಿ ಕೊಡುತ್ತಾ ಬಂದಿದೆ.
ಮಕ್ಕಳ ಅಂತರಾಳವನ್ನು ಅರಿತು ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ನಕಾರಾತ್ಮಕ ವಿಚಾರಗಳನ್ನು ತೊಡೆದು ಹಾಕಿ ಒಳ್ಳೆಯ ಸಂಸ್ಕಾರಯುತ ಶಿಕ್ಷಣವನ್ನು ಕೊಟ್ಟಾಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದರು.
ದೇಹದ ತೂಕ ಇಳಿಸಲು ವ್ಯಾಯಾಮ ಮಾಡಬೇಕು, ಮನಸ್ಸಿನ ಭಾರವನ್ನು ಇಳಿಸಲು ಧ್ಯಾನ ಮಾಡಬೇಕು, ನಿತ್ಯ ನಿರಂತರ ಪರಿಶ್ರಮ ಇದ್ದರೆ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದರು.
Sri Sri Prasannanatha Swamiji ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆಯ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಮಾತನಾಡುತ್ತಾ, ಪೋಷಕರು, ಶಿಕ್ಷಕರ ಜೊತೆಗೆ ಕೈಜೋಡಿಸಿದಾಗ ಮಾತ್ರ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದರು. ಶಿವಮೊಗ್ಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ ಆದರೆ ಶ್ರೀ ಆದಿಚುಂಚನಗಿರಿ ಸಂಸ್ಥೆಗಳಲ್ಲಿ ಶಿಕ್ಷಣ ಮತ್ತು ಸಂಸ್ಕಾರವನ್ನು ಕೊಡುವಂತಹ ಶಾಲೆ ಇದೆ ಅಂದ್ರೆ ಅದು ಗುರುಪುರದ ಬಿಜಿಎಸ್ ಶಾಲೆಯಲ್ಲಿ ಮಾತ್ರ ಕಾಣಬಹುದು. ಇಲ್ಲಿ ಒಂದು ವಿಶೇಷವೇನೆಂದರೆ 200 ಮೀಟರ್ ಗ್ರೌಂಡಿನಲ್ಲಿ ಶಿಕ್ಷಣ ಮತ್ತು ಕ್ರೀಡೆಗೆ ಹೆಚ್ಚು ಹೊತ್ತು ಕೊಡುವುದನ್ನು ಕಾಣಬಹುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಮೆಸ್ಕಾಂ, ಕಾರ್ಯಪಾಲಕ ಅಭಿಯಂತರಾದ ವೀರೇಂದ್ರ ಹೆಚ್. ಆರ್. ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ನಿರ್ದೇಶಕರಗಳು, ಪ್ರಾಂಶುಪಾಲರು, ಸಿಬ್ಬಂದಿಯ ವರ್ಗದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ರಾಜ್ಯ ಹಾಗೂ ರಾಷ್ಟ್ರಮತ್ತು ಅಂತರಾಷ್ಟ್ರ ಮಟ್ಟದ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಾಲಾ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೂಜ್ಯರಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಕೊನೆಯಲ್ಲಿ ಬಿಜಿಎಸ್ ಸಾಂಸ್ಕೃತಿಕ ಸಿರಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಇಂದಿನ ಆನ್ಲೈನ್ ಯುಗದಲ್ಲಿ ತಂದೆ ತಾಯಿಯರು ಅನಾಥರಾಗುತ್ತಿದ್ದಾರೆ. ಹಿರಿಯರು ನಿಜಕ್ಕೂ ವ್ಯವಸ್ಥೆಯಿಂದ ದೂರವಾಗುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಹಣ ಇಟ್ಟುಕೊಂಡಿದ್ದರು, ಮಕ್ಕಳು ದೂರದ ಎಲ್ಲೋ ಕೆಲಸಕ್ಕೆ ಎಂದು ಹೋಗಿರುತ್ತಾರೆ.ಆನ್ಲೈನ್ ವ್ಯವಸ್ಥೆಯಲ್ಲಿ ಗ್ಯಾಸ್,ನೀರು,ಊಟ, ಆಸ್ಪತ್ರೆ ಇತ್ಯಾದಿ ವ್ಯವಸ್ಥೆಯನ್ನು ಮಾಡುವಂತಹ ಈ ವ್ಯವಸ್ಥೆ ಹಿರಿಯರನ್ನು ಪ್ರೀತಿಯಿಂದ ವಂಚಿತರನ್ನಾಗಿ ಮಾಡಿದೆ.ಇಡೀ ಪ್ರಪಂಚ ಭಾರತದ ಸಂಸ್ಕೃತಿಯನ್ನು ಮೆಚ್ಚಿಕೊಂಡಿದೆ ಆದರೆ ನಾವು ಸಂಸ್ಕೃತಿಯನ್ನೇ ಮರೆಯುವ ಹಂತಕ್ಕೆ ಹೋಗಿದ್ದೇವೆ. ಹಾಗಾಗಿ ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಗುರುಹಿರಿಯರನ್ನು ಗೌರವಿಸುವ,ರಕ್ಷಿಸುವ ಕಾರ್ಯವನ್ನು ಯಾವುದೇ ಕಾರಣಕ್ಕೂ ಮರೆಯದಿರಿ.

ನಾಗೇಂದ್ರ ಡಿ. ಕಂದಾಯ ವಿಭಾಗದ ಅಧಿಕಾರಿಗಳು, ಶಿವಮೊಗ್ಗ. ಮಹಾನಗರ ಪಾಲಿಕೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...