Monday, February 2, 2026
Monday, February 2, 2026

Kuvempu ಕುವೆಂಪು ಅವರ ಗೀತೆಗಳು ಸಮಾಜದ ಓರೆಕೋರೆಗಳನ್ನ ತಿದ್ದುವಲ್ಲಿ ಯಶಸ್ವಿಯಾಗಿವೆ- ಶಾಂತಾ ಶೆಟ್ಟಿ

Date:

Kuvempu ಸಾಹಿತ್ಯ ಕ್ಷೇತ್ರಗಳಲ್ಲಿ ರಾಷ್ಟ್ರಕವಿ ಕುವೆಂಪು ರವರ ಕೊಡುಗೆ ಅವಿಸ್ಮರಣೀಯ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತು , ಚಿರಂತನ ಯೋಗ ಹಾಗೂ ಸಂಗೀತ ಟ್ರಸ್ಟಿನ ಅಧ್ಯಕ್ಷೆ ಶಾಂತ ಎಸ್ ಶೆಟ್ಟಿ ಹೇಳಿದರು.

ಅವರು ಇಂದು ಕುವೆಂಪುರಂಗ ಮಂದಿರದ ಆವರಣದಲ್ಲಿ ರಾಷ್ಟ್ರಕವಿ ರಸ ಋಷಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕ ಹಾಗೂ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಗೀತಾ ಹಾಗೂ ಕವಿತೆ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುವೆಂಪು ಅವರ ಕ್ರಾಂತಿಕಾರಿ ಗೀತೆಗಳು ಹಾಗೂ ನಾಡಗೀತೆ ಇಂದಿಗೂ ಸಹ ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಯಶಸ್ವಿಯಾಗಿವೆ ಹಾಗೆ ಅವರ ಒಂದೊಂದು ಗೀತೆಗಳು ಸಹ ಇಂದು ಅತ್ಯಂತ ಪ್ರಸ್ತುತವಾಗಿದೆ ಎಂದರು.
ಹಾಗೆಯೇ ಈ ನಾಡು ಕಂಡ ಒಬ್ಬ ಶ್ರೇಷ್ಠ ಗಾಯಕ ಸಿ ಅಶ್ವಥ್ ಅವರ ಜನ್ಮದಿನವೂ ಕೂಡ. ಅವರ ಕನ್ನಡವೇ ಸತ್ಯ ಹಾಗೂ ಭಾವಗೀತೆ ಅನೇಕ ಗೀತೆಗಳು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯಾಗಿವೆ ಎಂದರು.

Kuvempu ಕನ್ನಡ ಸಾರಸ್ವತ ಲೋಕದ ಮೇರು ಸಾಹಿತಿ ಹಾಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮ ಸೃಜನಶೀಲತೆಯನ್ನು ಮೆರೆಯುವಾಗ ಎಲ್ಲಿಯೂ ಸಾಮಾಜಿಕ ನೆಲಗಟ್ಟಿನ ಚಿಂತನೆಗಳನ್ನು ಕಡೆಗಣಿಸದ ವಿಶ್ವ ಮಾನವ ಎಂದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಮಾತನಾಡಿ ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಧೀಮಂತ ಸಾಹಿತಿ ,ಕನ್ನಡದ ಎರಡನೇ ರಾಷ್ಟ್ರಕವಿ, ಪಂಪ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಇಂತಹ ಮೇರು ವ್ಯಕ್ತಿತ್ವ ಇರುವ ಕುವೆಂಪು ಅವರು ನಮ್ಮ ಜಿಲ್ಲೆಯವರೇ ಎಂದು ಹೇಳಿಕೊಳ್ಳಲು ತುಂಬಾ ಹೆಮ್ಮೆಯಾಗುತ್ತದೆ, ಕುವೆಂಪು ಅವರ ಗೀತೆಗಳು ಒಂದೊಂದು ಸಾಲುಗಳು ಸಹ ತುಂಬಾ ಅರ್ಥಪೂರ್ಣ ಎಂದರು.
ಕುವೆಂಪು ಅವರು ಕೇವಲ ಕವಿ ಸಾಹಿತಿಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಧಾರ್ಮಿಕ ರಾಜಕೀಯ ಗುರು ಆಗಿ ಪರಿಸರದ ಪ್ರೇಮಿಯಾಗಿ ಮಾರ್ಗದರ್ಶಕರು ಚಿಂತಕರು ಆಗಿ ಸಾಹಿತ್ಯ ಕೃಷಿ ನಡೆಸಿದವರು ಅವರು ಹಾಕಿಕೊಟ್ಟ ಮಂತ್ರ ಮಾಂಗಲ್ಯ ಇಂದಿಗೂ ಸಹ ಜನಪ್ರಿಯತೆ ಪಡೆಯುವುದರ ಜೊತೆಗೆ ಪ್ರಸ್ತುತವಾಗಿದೆ
ಹಾಗೆ ಅವರ ತತ್ವ ಸಿದ್ಧಾಂತ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದರು.
ಇದೇ ಸಂದರ್ಭದಲ್ಲಿ ಕವಿ ಹಾಗೂ ಪರಿಷತ್ತಿನ ಸಂಚಾರಕರಾದ ಶೋಭಾ ಸತೀಶ್ ಅವರು ತಾವೇ ರಚಿಸಿದ ಕುವೆಂಪು ಕವನವನ್ನು ವಾಚಿಸಿದರು.
ಈ ಸಂದರ್ಭದಲ್ಲಿ ಸದಸ್ಯರು ಪದಾಧಿಕಾರಿಗಳು ಕುವೆಂಪು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.
ಕಾರ್ಯಕ್ರಮದಲ್ಲಿ ಬಿಂದು ವಿಜಯಕುಮಾರ್., ದಾಕ್ಷಾಯಿಣಿ, ರಾಜಕುಮಾರ್ ,
ರಮಾ ಸುಬ್ರಹ್ಮಣ್ಯ, ನಳಿನಾಕ್ಷಿ ರುದ್ರಪ್ಪ ಚೀಲೂರ್. ಸುಶೀಲ ಷಣ್ಮುಗಂ, ಲೀಲಾವತಿ, ಮಂಜು ನಾಯಕ್, ಹಾಗೂ ಗಾಯಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...