B. Y. Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ, ಶಿವಮೊಗ್ಗ ಹಾಗೂ ಶ್ರೀ ಬಸವೇಶ್ವರ ವೀರಶೈವ–ಲಿಂಗಾಯತ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾದ ಮೂರು ದಿನಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಕೊನೆಯ ದಿನದ ಲಿಂಗತತ್ವ ದರ್ಶನ ಪ್ರವಚನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.
ಪರಮಪೂಜ್ಯ ಮಹಾಸನ್ನಿಧಿ ಶ್ರೀಮತ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ವಿದ್ಯಾವಾಚಸ್ಪತಿ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಜಂಗಮವಾಡಿ ಮಠ, ವಾರಾಣಸಿ ಇವರ ದಿವ್ಯ ವಚನಗಳು ಲಿಂಗತತ್ವದ ಗಾಢ ಅರ್ಥ, ಮಾನವೀಯ ಮೌಲ್ಯಗಳು ಹಾಗೂ ಸಮಾಜದಲ್ಲಿ ಧರ್ಮ–ನೈತಿಕತೆಯ ಮಹತ್ವವನ್ನು ಸ್ಪಷ್ಟವಾಗಿ ತಿಳಿಸಿದವು..
B. Y. Raghavendra ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಮಾನ್ಯ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಸಿ.ಎಸ್. ಷಡಾಕ್ಷರಿ, ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್, ಶ್ರೀ ಎಸ್.ಪಿ. ದಿನೇಶ್, ಶ್ರೀ ಬಳ್ಳೇಕೆರೆ ಸಂತೋಷ್ ಹಾಗೂ ಅನೇಕ ಭಕ್ತವೃಂದದವರು ಉಪಸ್ಥಿತರಿದ್ದರು.
ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂಬುದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದರು
