Friday, June 19, 2026
Friday, June 19, 2026

B. Y. Raghavendra ಆಧ್ಯಾತ್ಮಿಕತೆ,ಸಂಸ್ಕೃತಿ ಮತ್ತು ಸಾಮಾಜಿಕ ಸೌಹಾರ್ದತೆ ಬೆಳೆಸುವ ಕಾರ್ಯಕ್ರಮಗಳು ನಿರಂತರ ನಡೆಯಲಿ- ಬಿ.ವೈ.ರಾಘವೇಂದ್ರ.

Date:

B. Y. Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ, ಶಿವಮೊಗ್ಗ ಹಾಗೂ ಶ್ರೀ ಬಸವೇಶ್ವರ ವೀರಶೈವ–ಲಿಂಗಾಯತ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾದ ಮೂರು ದಿನಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಕೊನೆಯ ದಿನದ ಲಿಂಗತತ್ವ ದರ್ಶನ ಪ್ರವಚನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಪರಮಪೂಜ್ಯ ಮಹಾಸನ್ನಿಧಿ ಶ್ರೀಮತ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ವಿದ್ಯಾವಾಚಸ್ಪತಿ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಜಂಗಮವಾಡಿ ಮಠ, ವಾರಾಣಸಿ ಇವರ ದಿವ್ಯ ವಚನಗಳು ಲಿಂಗತತ್ವದ ಗಾಢ ಅರ್ಥ, ಮಾನವೀಯ ಮೌಲ್ಯಗಳು ಹಾಗೂ ಸಮಾಜದಲ್ಲಿ ಧರ್ಮ–ನೈತಿಕತೆಯ ಮಹತ್ವವನ್ನು ಸ್ಪಷ್ಟವಾಗಿ ತಿಳಿಸಿದವು..

B. Y. Raghavendra ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಮಾನ್ಯ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಸಿ.ಎಸ್. ಷಡಾಕ್ಷರಿ, ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್, ಶ್ರೀ ಎಸ್.ಪಿ. ದಿನೇಶ್, ಶ್ರೀ ಬಳ್ಳೇಕೆರೆ ಸಂತೋಷ್ ಹಾಗೂ ಅನೇಕ ಭಕ್ತವೃಂದದವರು ಉಪಸ್ಥಿತರಿದ್ದರು.

ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂಬುದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...