Sunday, August 2, 2026
Sunday, August 2, 2026

S. N. Channabasappa ಶಿವಮೊಗ್ಗ ನಗರದ 2 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ. ಸಾರ್ವಜನಿಕ ಸಮಸ್ಯೆ ನೀಗಿಸಲು ಸೂಚನೆ

Date:

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 2ರ ಸಾನ್ವಿ ಲೇಔಟ್‌ನಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಪ್ರಮುಖವಾಗಿ ಬಡಾವಣೆಯ ಯುಜಿಡಿ ಸಮಸ್ಯೆ, ಕುಡಿಯುವ ನೀರಿನ ವ್ಯತ್ಯಯ ಮತ್ತು ಹದಗೆಟ್ಟಿರುವ ರಸ್ತೆಗಳ ಬಗ್ಗೆ ನಿವಾಸಿಗಳು ಗಮನ ಸೆಳೆದರು. ಚರಂಡಿ ನೀರು ನೇರವಾಗಿ ಕೆರೆಗೆ ಸೇರುತ್ತಿರುವ ಗಂಭೀರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕೆರೆಯ ಪಾವಿತ್ರ್ಯತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ಸಮಸ್ಯೆಯನ್ನು ತಕ್ಷಣವೇ ನಿವಾರಿಸಲು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಆದೇಶಿಸಿದರು.

S. N. Channabasappa ಕ್ಷೇತ್ರದ ಪ್ರತಿ ಬಡಾವಣೆಯೂ ಉತ್ತಮ ಮೂಲಭೂತ ಸೌಕರ್ಯವನ್ನು ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಭೇಟಿಯ ವೇಳೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವೀಂದ್ರ, ವಾರ್ಡ್ ಅಧ್ಯಕ್ಷರಾದ ಶಿವಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರಾದ ಪಾರ್ವತಮ್ಮ, ಶಿವಶಂಕರ್, ಅಜಯ್, ಶ್ರೀನಾಗ್ ಹಾಗೂ ಸಾನ್ವಿ ಲೇಔಟ್ ನ ನಿವಾಸಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...