Thursday, June 18, 2026
Thursday, June 18, 2026

Inner Wheel Club of Shimoga ವಿದ್ಯಾರ್ಥಿಗಳು ಗುರುಹಿರಿಯರೊಂದಿಗೆಗೌರವದಿಂದ ನಡೆದುಕೊಳ್ಳಬೇಕು- ವಾಣಿ ಪ್ರವೀಣ್

Date:

Inner Wheel Club of Shimoga ವಿದ್ಯಾರ್ಥಿಗಳು ಗುರು ಹಿರಿಯರೊಂದಿಗೆ ಗೌರವದಿಂದ ನಡೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಕ್ಲಬ್ ಮಾಜಿ ಅಧ್ಯಕ್ಷೆ ವಾಣಿ ಪ್ರವೀಣ್ ಹೇಳಿದರು.

ಸರ್ವೋದಯ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ನಡೆಸಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ತಿಳಿಸಿದರು.

ಕಿರುತೆರೆ ನಟ, ರಂಗಭೂಮಿ ಕಲಾವಿದ ಚಂದ್ರಶೇಖರ ಶಾಸ್ತ್ರಿ ಮಾತನಾಡಿ, ಬಡತನವನ್ನು ಮೆಟ್ಟಿ ನಿಲ್ಲಬಹುದಾದ ಶಕ್ತಿಯನ್ನು ನೀಡಬಹುದಾದ ಏಕೈಕ ಮಾರ್ಗವೆಂದರೆ ಅದು ಶಿಕ್ಷಣ ಮಾತ್ರ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಯ ಖಜಾಂಚಿ ಚಂದ್ರಹಾಸ್ ಪಿ.ರಾಯ್ಕರ್ ಸಮಾರಂಭದ ಸಮಾರೋಪ ಭಾಷಣ ನೆರವೇರಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಬಹಳ ಮುಖ್ಯವಾಗುತ್ತವೆ ಎಂದರು.

Inner Wheel Club of Shimoga ಸರ್ವೋದಯ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಚ್.ಎಂ.ಮಧು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಲಭ್ಯವಾಗುವ ಸ್ಪರ್ಧಾತ್ಮಕ ಹಾಗೂ ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಶಿಕ್ಷಣದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಕಿರುತೆರೆ ನಟ, ರಂಗಭೂಮಿ ಕಲಾವಿದ ಚಂದ್ರಶೇಖರ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಪಿ.ಜಿ.ರವಿಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಅಕ್ಷತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...