Sunday, August 2, 2026
Sunday, August 2, 2026

Keladi Shivappa Nayaka University ನವುಲೆ ಕೃಷಿ ಕಾಲೇಜು ಎದುರು ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು. ಗ್ರಾಮಾಂತರ ಪೊಲೀಸ್ ಠಾಣೆ ಮಾಹಿತಿ.

Date:

Keladi Shivappa Nayaka University ಡಿ.30 ರಂದು ನವುಲೆಯ ಕೃಷಿ ಕಾಲೇಜು ಎದುರು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಅದೇ ದಿನ ವ್ಯಕ್ತಿ ಮೃತಪಟ್ಟಿರುತ್ತಾನೆ.

ಮೃತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ, ತಲೆಯಲ್ಲಿ ಎರಡು ಇಂಚು ಉದ್ದದ ಬಿಳಿ ಕೂದಲು, ಬಿಳಿ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೃತನ ಎಡಪಕ್ಕೆಯಲ್ಲಿ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಬಲಕೆನ್ನೆಯಲ್ಲಿ ಗ್ಯಾಂಗ್ರೀನ್ ಆಗಿದ್ದು ದವಡೆಗಳು ಕಾಣುತ್ತಿರುತ್ತವೆ. ಮತ್ತು ರಕ್ತ ಕೀವು ಸೋರಿರುತ್ತದೆ.

Keladi Shivappa Nayaka University ಬಿಸ್ಕೇಟ್ ಕಲರಿನ ಅರ್ಧ ತೋಳಿನ ಷರ್ಟ್, ನೀಲಿ ಬಿಳಿ ಬಣ್ಣದ ಡಿಸೈನ್‌ನ ಲುಂಗಿ ಪಂಚೆ ಧರಿಸಿರುತ್ತಾನೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಸಿಪಿಐ ಗ್ರಾಮಾಂತರ ವೃತ್ತ ಶಿವಮೊಗ್ಗ, ಪಿಎಸ್‌ಐ ಗ್ರಾಮಾಂತರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100 ಹಾಗೂ 08182-261418, 261410, 9480803350 ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಗ್ರಾಮಾಂತರ ಪೊಲೀಸ್ ಠಾಣೆ ಠಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...