Friday, March 20, 2026
Friday, March 20, 2026

Sri Ramakrishna Vidyashrama Trust ರಾಮಕೃಷ್ಣ ವಿದ್ಯಾಸಂಸ್ಥೆಯ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭ

Date:

Sri Ramakrishna Vidyashrama Trust ಅನುಪಿನಕಟ್ಟೆಯಲ್ಲಿರುವ ರಾಮಕೃಷ್ಣ ಆಂಗ್ಲ ಮಾಧ್ಯಮ ವಸತಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ 2026-27ರ ಸಾಲಿನಲ್ಲಿ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜುನ್ನು ಆರಂಭಿಸಲು ಸಕಲ ಸಿದ್ಧತೆ ನಡೆಸಲಾಗಿದ್ದು, ಕಟ್ಟಡ ಹಾಗೂ ಪಿಯು ಕಲಿಕೆಗೆ ಅಗತ್ಯದ ಎಲ್ಲಾ ಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ.

ರಾಮಕೃಷ್ಣ ಗುರುಕುಲದಲ್ಲಿ ನಡೆದ ಜನ್ಮದಾತರ ಪಾದಪೂಜೆ ಸಮಾರಂಭದ ದಿವ್ಯಸಾನಿದ್ಯ ವಹಿಸಿದ್ದ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ರಾಮಕೃಷ್ಣ ವಿಜ್ಞಾನ ಪದವಿ ಪೂರ್ವ ಕಾಲೇಜು ಶಿರೋನಾಮೆಯನ್ನು ಉದ್ಘಾಟಿಸಿ, ಅತ್ಯಂತ ವ್ಯವಸ್ಥಿತವಾದ ಶಿಕ್ಷಣ ನೀಡುತ್ತಿರುವ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಪಿಯು ವಿಭಾಗ ಆರಂಭಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಇಂದು ದೂರದ ಊರಿಗೆ ಹೋಗಿ ಮಕ್ಕಳು ಕಲಿಯುವ ಅಗತ್ಯವಿಲ್ಲ. ಉತ್ತಮ ಶಿಕ್ಷಣ ನಮ್ಮಲ್ಲೇ ಸಿಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಶಿಕ್ಷಣ ಈ ಸಂಸ್ಥೆಯಿಂದ ದೊರೆಯುತ್ತದೆ ಎಂಬ ನಂಬಿಕೆ ಇದೆ. ಆ ನಿಟ್ಟಿನಲ್ಲಿ ವಿದ್ಯಾ ಸಂಸ್ಥೆ ಕೆಲಸ ಮಾಡಿದೆ ಎಂದರು.
ಪೋಷಕರು ಯಾವುದೇ ಅನುಮಾನ ಪಡದೇ ತಮ್ಮ ಮಕ್ಕಳನ್ನು ಇಲ್ಲಿನ ಪಿಯು ವಿಭಾಗಕ್ಕೆ ಸೇರಿಸುವಂತೆ ಅವರು ಪೋಷಕರಿಗೆ ಕರೆ ನೀಡಿದರು.

Sri Ramakrishna Vidyashrama Trust ಸಾವಿರಾರು ಮಕ್ಕಳನ್ನು ಹಾಗೂ ಅವರ ಪೋಷಕರನ್ನು ಒಂದೆಡೆ ಸೇರಿಸಿ ಜನ್ಮದಾತರ ಪಾದಪೂಜೆಯನ್ನು ಅತ್ಯಂತ ಯಶಸ್ವಿಯಾಗಿ ಕಳೆದ 19 ವರ್ಷಗಳಿಂದ ನಡೆಸುತ್ತಾ ಬಂದಿರುವ ಈ ಸಂಸ್ಥೆ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ನಿಲುವುಗಳ ಜೊತೆಗೆ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆಯನ್ನು ನೀಡಿರುವುದು ಶ್ಲಾಘನೀಯ ಎಂದರು.

ಇಲ್ಲಿನ ಕಲಿಕೆಯ ಮಕ್ಕಳು ಉತ್ತಮ ಭವಿಷ್ಯವನ್ನು ಪಡೆಯುತ್ತಾರೆ ಎಂದು ಅದಿಚುಂಚನಗಿರಿ ಶ್ರೀಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...