Friday, March 20, 2026
Friday, March 20, 2026

CM Siddharamaih ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಕಾಲದ ಸೇವೆ, ಸಿದ್ಧರಾಮಯ್ಯನವರಿಗೆ ಅಭಿನಂದಿಸಿದ ಶಾಸಕ ಬಸವರಾಜ ರಾಯರೆಡ್ಡಿ

Date:

CM Siddharamaih ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿದ್ದಾರೆ.

ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ರಾಜಕೀಯ ಇತಿಹಾಸವು ಜನಪರ ಆಡಳಿತ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರ ದಿಟ್ಟ ಹೋರಾಟಗಳಿಂದ ರೂಪುಗೊಂಡ ಸುವರ್ಣ ಪರಂಪರೆಯನ್ನು ಹೊಂದಿದೆ. ಶೋಷಿತರು, ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಧೈರ್ಯವಾಗಿ ನಿಂತ ನಾಯಕರಿಂದಲೇ ಈ ನಾಡಿನ ಪ್ರಗತಿಪರ ರಾಜಕೀಯ ಸಂಸ್ಕೃತಿ ಬೆಳೆದಿದೆ.

ಆ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ಸನ್ಮಾನ್ಯ ಶ್ರೀ ದಿವಂಗತ ದೇವರಾಜ ಅರಸು ಅವರು ಅಗ್ರಗಣ್ಯರು. ಅವರು 20-03-1972 ರಿಂದ 31-12-1977 ರವರೆಗೆ ಹಾಗೂ 28-02-1978 ರಿಂದ 07-01-1980 ರವರೆಗೆ ಒಟ್ಟಾರೆ 2792 ದಿನಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ಭೂ ಸುಧಾರಣೆ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಉನ್ನತಿ ಮತ್ತು ಶೋಷಿತರ ಸಬಲೀಕರಣದ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅಮರ ಅಧ್ಯಾಯವೊಂದನ್ನು ರಚಿಸಿದರು.

ಅದಲ್ಲದೆ ಕರ್ನಾಟಕ ರಾಜ್ಯವನ್ನು ಪ್ರಗತಿಪರ ಚಿಂತನೆಯತ್ತ ತರುವುದರಲ್ಲಿ ಹಿಂದಿನ ಮುಖ್ಯಮಂತ್ರಿಗಳಾದ ಶ್ರೀಯುತ ಕೆಂಗಲ್ ಹನುಮಂತಯ್ಯ ,ಶ್ರೀಯುತ ನಿಜಲಿಂಗಪ್ಪ, ಶ್ರೀಯುತ ರಾಮಕೃಷ್ಣ ಹೆಗಡೆ ಇವರುಗಳ ವಿಶಾಲ ದೃಷ್ಟಿಕೋನದ ವಿಚಾರಗಳು ಹಾಗೂ ಪ್ರಾಮಾಣಿಕ ಚಿಂತನೆಗಳು ನಮ್ಮ ಮುಂದೆ ಇಂದಿಗೂ ಜೀವಂತ ಇರುತ್ತವೆ

ಅದೇ ಸಾಮಾಜಿಕ ನ್ಯಾಯ ತಾತ್ವಿಕ ಮತ್ತು ರಾಜಕೀಯ ಪರಂಪರ ಮತ್ತು ಸರ್ವಾಂಗೀಣ ಅಭಿವೃದ್ಧಿ ಚಿಂತನೆಗಳನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರೆಸಿಕೊಂಡು, ಕರ್ನಾಟಕದ ಇತಿಹಾಸಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿ ನೀವು 13-05-2013 ರಿಂದ 15-05-2018 ರವರೆಗೆ ಹಾಗೂ 20-05-2023 ರಿಂದ 06-01-2026 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು, ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಹಾಗೂ ಮುಂದಿನ ಎರಡುವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರಿ ಎಂದು ನನ್ನ ನಂಬಿಕೆಯಾಗಿದೆ.

CM Siddharamaih ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವು ಸ್ಪಷ್ಟವಾಗಿ ಜನಪರ, ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯ ಕೇಂದ್ರಿತವಾಗಿದೆ. ರಾಜ್ಯದ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಯಾವುದೇ ಧರ್ಮ ಜಾತಿ ಭೇದವಿಲ್ಲದೆ
ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನು ಒದಗಿಸುವಲ್ಲಿ ನಿಮ್ಮ ನಿಮ್ಮ ಪ್ರಾಮಾಣಿಕ ವಿಚಾರಗಳು ಮಹತ್ವದ ಪಾತ್ರ ವಹಿಸಿದೆ.

ಈ ಯೋಜನೆಗಳು ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣರಾಜ್ಯದ ಮಾದರಿಯಾಗಿ ರೂಪಿಸುವ ದಿಟ್ಟ ರಾಜಕೀಯ ಸಂಕಲ್ಪದ ಪ್ರತಿಬಿಂಬಗಳಾಗಿವೆ. ನಿಮ್ಮ
ಆಡಳಿತದಲ್ಲಿ ಪಾರದರ್ಶಕತೆ, ಹಣಕಾಸು ಶಿಸ್ತು, ಸಂವಿಧಾನದ ಮೌಲ್ಯಗಳಿಗೆ ಅಚಲ ನಿಷ್ಠೆ ಹಾಗೂ ಜಾತಿ–ಧರ್ಮ–ಭಾಷೆಗಳ ಅತೀತವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಸಮನ್ವಯದ ರಾಜಕಾರಣವು ನಿಮ್ಮ ನಾಯಕತ್ವದ ವಿಶಿಷ್ಟ ಗುರುತುಗಳಾಗಿವೆ ಎಂದಿದ್ದಾರೆ.

ಸಿದ್ದರಾಮಯ್ಯನವರ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ.

ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆಯ ಪರವಾಗಿ, ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ, ಜನಪರ ನೀತಿಗಳಿಗೆ ಹಾಗೂ ರಾಜ್ಯವನ್ನು ಸಮಾನತೆ, ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ದಿಟ್ಟವಾಗಿ ಮುನ್ನಡೆಸುತ್ತಿರುವ ಸಿದ್ದರಾಮಯ್ಯನವರ ಅವಿರತ ಸೇವೆಗೆ ಗೌರವಪೂರ್ವಕ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇವರ ಆಡಳಿತವು ಮುಂದಿನ ಪೀಳಿಗೆಗಳಿಗೆ ದಾರಿದೀಪವಾಗಲಿ.
ಕರ್ನಾಟಕವು ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಾದರಿ ರಾಜ್ಯವಾಗಿ ರಾಷ್ಟ್ರಮಟ್ಟದಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ದೃಢಪಡಿಸಲಿ ಎಂಬುದು ನನ್ನ ಹಾರೈಕೆ ಎಂದು ಹೇಳಿದ್ದಾರೆ.

ಶ್ರಿ ಬಸವರಾಜ ರಾಯರಡ್ಡಿ.
ಮಾನ್ಯ ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರು ಹಾಗೂ ಶಾಸಕರು ಯಲಬುರ್ಗಾ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...