Thursday, March 19, 2026
Thursday, March 19, 2026

Akhila Bharatiya Sahitya Parishath ಪರಿಸರ ರಕ್ಷಣೆ ಕುರಿತ ಕವಿತೆ ರಚಿಸಲು ಕವಿಗಳಿಗೆ ಅಭಾಸಾಪ ಆಹ್ವಾನ

Date:

Akhila Bharatiya Sahitya Parishath ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಶಾಖೆಯ ವತಿಯಿಂದ ಜನವರಿ ೧೦ರ ಶನಿವಾರ ಸಂಜೆ ೫.೩೦ ಗಂಟೆಗೆ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ವಿನೋಬಾ ನಗರದ ವಿಕಾಸ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ನಡೆಯಲಿದೆ.
ಈ ಬಾರಿ ಕವಿಗೋಷ್ಠಿಗೆ “ಪರಿಸರ ರಕ್ಷಣೆ” ವಿಷಯವನ್ನು ನಿಗದಿಪಡಿಸಲಾಗಿದ್ದು, ಕವಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಕವಿತೆಗಳನ್ನು ರಚಿಸಿ ಪ್ರಸ್ತುತಪಡಿಸಲು ಕೋರಲಾಗಿದೆ. ಪರಿಷತ್ತಿನ ಕವಿತಾ ರಚನಾ ಕಮ್ಮಟದಲ್ಲಿ ಛಂದೋಬದ್ಧ ರಚನೆಗಳ ಕುರಿತು ತರಬೇತಿ ಪಡೆದ ಕವಿಗಳು ಛಂದೋಬದ್ಧ ಕವಿತೆಗಳೊಂದಿಗೆ ಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಇತರೆ ಕವಿಗಳು ತಮ್ಮದೇ ಶೈಲಿಯ ಕವಿತೆಗಳನ್ನು ವಾಚಿಸಬಹುದಾಗಿದೆ.
ಕವಿಗೋಷ್ಠಿಯನ್ನು ಖ್ಯಾತ ವೈದ್ಯಕೀಯ ಲೇಖಕ ಹಾಗೂ ಹಿರಿಯ ಕುಟುಂಬ ಸಲಹಾ ವೈದ್ಯರಾದ ಡಾ. ಕೃಷ್ಣ ಎಸ್. ಭಟ್ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಶಿವಮೊಗ್ಗ ಶಾಖೆಯ ಅಧ್ಯಕ್ಷ ಡಾ. ಸುಧೀಂದ್ರ ವಹಿಸಲಿದ್ದಾರೆ.
Akhila Bharatiya Sahitya Parishath ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತರಾದ ಕವಿಗಳು ಸುರೇಶ್ ಭಟ್ ಅವರನ್ನು ಮೊಬೈಲ್ ಸಂಖ್ಯೆ ೯೪೪೮೩ ೦೩೭೪೦ರಲ್ಲಿ ಸಂಪರ್ಕಿಸುವಂತೆ ಸಂಘಟಕರು ತಿಳಿಸಿದ್ದಾರೆ. ಸಾಹಿತ್ಯಾಸಕ್ತರಿಗೆ ಕಾರ್ಯಕ್ರಮಕ್ಕೆ ಆದರದ ಸ್ವಾಗತವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...