Wednesday, August 12, 2026
Wednesday, August 12, 2026

District Chamber of Commerce and Industry ಸಂಗೀತ ಕಲಿಕೆಯಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿ- ಎಸ್.ಆರ್.ಮಂಜುನಾಥ್

Date:

District Chamber of Commerce and Industry ಒತ್ತಡದ ಕಾರ್ಯ ಹಾಗೂ ಜೀವನಶೈಲಿಯಿಂದ ಹೊರಬರಲು ಸಂಗೀತ ಆಲಿಸುವಿಕೆ ಮತ್ತು ಕಲಿಕೆಯು ಸಹಕಾರಿಯಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆಯಿಂದ ಆಯೋಜಿಸಿದ್ದ ಗಾಯನ ಸಮ್ಮಿಲನ 1 ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಧುರವಾದ ಸಂಗೀತ ಆಲಿಸುವಿಕೆಯು ಮನಸ್ಸನ್ನು ಸಂತೋಷಗೊಳಿಸುತ್ತದೆ. ಸಂಗೀತ ಕಲಿಯುವುದರಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಶಿಕ್ಷಕರು ಕಾಲಕಾಲಕ್ಕೆ ಈ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡಬೇಕು. ಇಂತಹ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕ ಎಂದರು.

ರಾಗರಂಜಿನಿ ಟ್ರಸ್ಟ್ ಸ್ವರ ಸಂಯೋಜಕ ಪ್ರಹ್ಲಾದ್ ದೀಕ್ಷಿತ್ ಮಾತನಾಡಿ, ಸಂಗೀತ ಆಸಕ್ತರು ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಜೀವನ ಸುಂದರಗೊಳಿಸಲು ಸಂಗೀತ ನೆರವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಆಲಿಸುವುದರಿಂದ ಮನಸ್ಸು ಸಂತಸಗೊಂಡು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

District Chamber of Commerce and Industry ಎಸ್.ಆರ್.ಮಂಜುನಾಥ್, ಪ್ರಹ್ಲಾದ್ ದೀಕ್ಷಿತ್ ಹಾಗೂ ಜಿ.ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆ ಸಂಸ್ಥಾಪಕ, ಆಯೋಜಕರಾದ ಶಿಕ್ಷಕ ಬಿ.ಕುಬೇರ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಕೆ.ಕೆ.ಶಶಿರೇಖಾ ವಂದನಾರ್ಪಣೆ ನಡೆಸಿಕೊಟ್ಟರು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕಿ ಸುಮಾ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...