Thursday, March 19, 2026
Thursday, March 19, 2026

Shivamogga District Chamber of Commerce and Industry ಮಹಿಳೆಯರು ಸ್ವಾವಲಂಬಿಗಳಾಗಲು ಪ್ರೋತ್ಸಾಹ ಮತ್ತು ಬೆಂಬಲ ಅಗತ್ಯವಿದೆ : ರಮೇಶ್ ಹೆಗಡೆ

Date:

Shivamogga District Chamber of Commerce and Industry ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆ ಹೇಳಿದರು.
ಪಂಪ ನಗರದ ಗುತ್ತ್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಅಂತರ ರಾಜ್ಯ ಮಟ್ಟದ ಮಲೆನಾಡು ಮೇಳ2026 ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು. ಮಹಿಳೆಯರು ಸ್ವಾವಲಂಬಿಗಳಾಗಬೇಕು ತಮ್ಮ ಬದುಕಿನ ಜಂಜಾಟದೊಂದಿಗೆ ಇಂತಹ ಮೇಳಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಹಿಳೆಯರು ಸಮಾಜದಲ್ಲಿ ಪರಿಪೂರ್ಣತೆಯನ್ನು ಹೊಂದುತ್ತಾರೆ ಎಂದು ನುಡಿದರು.
ಒಕ್ಕಲಿಗರ ಮಹಿಳಾ ವೇದಿಕೆಯ ಅಧ್ಯಕ್ಷರಾದ ಪ್ರೇಮಾ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ , ಇಂತಹ ಮೇಳಗಳ ಆಯೋಜನೆಯಿಂದ ಸಮಾಜದ ಎಲ್ಲರೊಂದಿಗೆ ಓಡನಾಟ ಸಂಪರ್ಕ ಹೆಚ್ಚಲಿದ್ದು, ಆರ್ಥಿಕವಾಗಿ ಸಬಲರಾಗುತ್ತಾರೆ ಎಂದರು. ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್, ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ಮಲೆನಾಡು ಮೇಳ ಆಯೋಜಿಸಿದ್ದು, ಈ ಮೇಳದಲ್ಲಿ ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗು ಮಾಂಸಾಹಾರಿ ತಿನುಸುಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ ಈ ಬಾರಿಯ ತುಂಬಾ ವಿಶೇಷ ಅಂದರೆ ವಾರಣಾಸಿಯಿಂದ ವಿಶೇಷ ಬನಾರಸ್ಸು ಸ್ಯಾರಿ ಅಂಗಡಿಯವರು ಬೆಂಗಳೂರು ಮಂಗಳೂರು ಮಡಿಕೇರಿ ಹಾಸನ ದಿಂದ ಮಹಿಳೆಯರೇ ತಯಾರು ಮಾಡಿದ ಕರಕುಶಲ ವಸ್ತುಗಳು ಮಳಿಗೆ ಹಾಕಿರುವುದು ತುಂಬಾ ವಿಶೇಷವಾಗಿದೆ ಎಂದು ನುಡಿದರು.
Shivamogga District Chamber of Commerce and Industry ಒಕ್ಕಲಿಗರ ಮಹಿಳಾ ವೇದಿಕೆಯ ಕಾವ್ಯ ಸತೀಶ್ ಮಾತನಾಡಿ, ಮಹಿಳೆಯರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಸಾಧನೆ ಮಾಡುತ್ತಿದ್ದು, ಕುಟುಂಬ, ಸ್ನೇಹಿತ ವರ್ಗ ಹಾಗೂ ಎಲ್ಲರ ಸಹಕಾರದಿಂದ ಇನ್ನಷ್ಟು ಸಾಧನೆ ಮಾಡಬೇಕು ಎಂದು ಆಶಿಸಿದರು.
ಬೆಂಗಳೂರು, ಬೇಲೂರು, ಕೊಪ್ಪ, ಶೃಂಗೇರಿ, ಜಯಪುರ, ತರೀಕೆರೆ, ಭದ್ರಾವತಿ, ಸಾಗರ, ತೀರ್ಥಹಳ್ಳಿ. ವಾರಣಾಸಿ ಹಾಸನ ಮಡಿಕೇರಿ ಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ಸ್ಟಾಲ್‌ಗಳನ್ನು ಹಾಕಿದ್ದರು. ಮನೆಯಲ್ಲಿ ತಯಾರಿಸಿದ ಹಿಟ್ಟು ಉಂಡೆ, ಹುಲ್ಲಿಂದ ತಯಾರಿಸಿದ ಬುಟ್ಟಿಗಳು, ಮನೆಯಲ್ಲಿ ತಯಾರಿಸಿದ ತಿಂಡಿಗಳು ವೈನ್. ಕೇಕ್ ಬಹಳ ದೊಡ್ಡ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಸ್ಟಾಲ್‌ಗಳು ಇದ್ದವು.
ಡಾಕ್ಟರ್ ಸೌರಭ ಹರ್ಷ , ಖಜಾಂಜಿ ಮಾಮ್ ಕೋಸಿನ ಇಂಜಿನಿಯರ್ ವೀರೇಂದ್ರ ಸುಪ್ರಿಯಾ ರಾಮಪ್ಪ, ಅಂಜು ಸುರೇಶ್, ಅರ್ಚನಾ, ಪ್ರಭಾ ಶ್ರೀನಾಥ್. . ವಿಜಯ ನಾಗೇಶ್. ಡಾಕ್ಟರ್ ಶ್ರೀಕಾಂತ್. ಛಾಯಕ್ಕ ದೇವಂಗಿ ಸುಜಯಾ ಪುರುಷೋತ್ತಮ್ , ಹಾಗೂ. ಇನ್ನರ್ವಿಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಕಾರ್ಯಕಾರಿ ಸಮಿತಿಯವರು ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...