Sunday, August 2, 2026
Sunday, August 2, 2026

Scouts and Guides ಸ್ಕೌಟ್ಸ್ & ಗೈಡ್ಸ್ ನಲ್ಲಿ ಭಾಗವಹಿಸುವಿಕೆ: ನಾಯಕತ್ವ ಗುಣ ವೃದ್ಧಿಗೆ ಪ್ರೇರಕ- ರಾಜೇಶ್ ಅವಲಕ್ಕಿ

Date:

Scouts and Guides ಶಾಲೆಯಲ್ಲಿ ಮಕ್ಕಳು ಪಠ್ಯಪುಸ್ತಕ ತರಬೇತಿ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ವೃದ್ಧಿಸುತ್ತದೆ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ ನ ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಹೇಳಿದರು.

ಮೇರಿ ಇಮ್ಯಾಕ್ಯುಲೇಟ್ ಹೈಯರ್ ಪ್ರೈಮರಿ ಸ್ಕೂಲ್ ಓಲ್ಡ್ ಸ್ಟೂಡೆಂಟ್ಸ್ 1982ರ ಬ್ಯಾಚ್ ವಿದ್ಯಾರ್ಥಿಗಳಿಂದ ಶಾಲೆಯ 20 ಮಕ್ಕಳಿಗೆ ಗೈಡ್ಸ್ ಮಕ್ಕಳ ಯೂನಿಫಾರ್ಮ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಹಾಗೂ ಸಮಾಜದಲ್ಲಿ ಬದುಕುವ ರೀತಿ ಕಲಿಸಿಕೊಡುತ್ತದೆ. ಕೌಶಲ್ಯದ ಜೊತೆ ಮನುಕುಲ ಸೇವೆ ಕಲ್ಪಿಸುವ ಸ್ಕೌಟ್ಸ್ ಆಂಡ್ ಗೈಡ್ಸ್ ಇಂದಿನ ಕಾಲಘಟ್ಟಕ್ಕೆ ಪ್ರಸ್ತುತ ಎಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯ ಸಿಸ್ಟರ್ ಬೆನಿಕ್ಟ ಡಿಸೋಜಾ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು, ದೇಶವಿದೇಶದಲ್ಲಿ ಖ್ಯಾತಿ ಹೊಂದಿದ್ದಾರೆ. ಆದರೆ ಕಡಿಮೆ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರ ನೆನೆದು ಈ ಶಿಕ್ಷಣ ಸಂಸ್ಥೆಗೆ ಅಪಾರ ಸೇವೆ ಸಲ್ಲಿಸುತ್ತ ಬಂದಿದ್ದಾರೆ. 1982ರಲ್ಲಿ ಓದಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅವರ ಈ ಶಾಲೆಗೆ ಸ್ವಯಂ ಪ್ರೇರಿತರಾಗಿ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಮತ್ತು ಸಮವಸ್ತ್ರಗಳ ಕೊಡುಗೆ, ವಿದ್ಯಾರ್ಥಿಗಳ ವಾರ್ಷಿಕ ಶುಲ್ಕ ಸಹಾಯ ಮಾಡುತ್ತಿದ್ದಾರೆ. ಇವರ ಸೇವೆ ಶಿಕ್ಷಣ ಸಂಸ್ಥೆಗೆ ನಿರಂತರವಾಗಿ ಮುಂದುವರೆಯಬೇಕು ಎಂದು ತಿಳಿಸಿದರು.

Scouts and Guides ಕಾರ್ಯಕ್ರಮದ ನಿರೂಪಣೆಯನ್ನು ಕ್ರಿಸ್ಟಿನಾ ಶೀಲ ನೆರವೇರಿಸಿದರು. ರವಿ ಕೋಟೋಜಿ, 1982ನೇ ಸಾಲಿನ ವಿದ್ಯಾರ್ಥಿಗಳಾದ ಸಂತೋಷ್, ಧರ್ಮೇಂದ್ರ ಸಿಂಗ್, ಜಾನಿ ಜೋಸೆಫ್, ಟ್ರೆಸ್ಸಿ ಫರ್ನಾಂಡಿಸ್, ಕ್ರಿಸ್ಟಫರ್ ನಟರಾಜ್, ಅಲ್ಲುಲ್ಲ ಖಾನ್, ಸುಹಾಸ್ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...