Shimoga News ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜ.11 ರಂದು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಪರೀಕ್ಷೆಗಳನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಕುರಿತು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಗಳು ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 11.30 ರಿಂದ 12.30 ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಪರೀಕ್ಷೆಗೆ ಜಿಲ್ಲೆಯಿಂದ ಬೆಳಿಗ್ಗೆ ಒಟ್ಟು 4313 ಮತ್ತು ಮಧ್ಯಾಹ್ನ 4271 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ.
ಪ್ರಶ್ನೆ ಪತ್ರಿಕೆ ವಿತರಕ ಮಾರ್ಗಗಳನ್ನು ನಿಗದಿಪಡಿಸಿದ್ದು, ಪತ್ರಿಕೆ ಸಾಗಾಟ ಮಾಡಲು ಸಂಬAಧಿಸಿದAತೆ ತ್ರಿಸದಸ್ಯ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಪರೀಕ್ಷಾ ಗೌಪ್ಯ ಸಾಮಗ್ರಿಯನ್ನು ಠೇವಣಿಕರಿಸಲು ಮತ್ತು ವಿತರಿಸಲು ಜಿಲ್ಲಾ ಖಜಾನೆಗೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ ಹಾಗೂ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂಧ್ ಮಾಡಲು ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್, ಪರೀಕ್ಷಾರ್ಥಿಗಳ ತಪಾಸಣೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಎ ಮತ್ತು ಬಿ ದರ್ಜೆಯ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಹಿರಿಯ ಪ್ರಾಂಶುಪಾಲರನ್ನು ಪ್ರಶ್ನೆ ಪತ್ರಿಕೆ ಪಾಲಕರನ್ನಾಗಿ ಹಾಗೂ ಒಬ್ಬರು ಉಪನ್ಯಾಸಕರನ್ನು ಜಾಗೃತದಳದ ಸಿಬ್ಬಂದಿಯಾಗಿ ನೇಮಿಸಲಾಗಿದೆ.
Shimoga News ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಜ್ಯಾಮರ್ಗಳನ್ನು ಅಳವಡಿಸಲಾಗುವುದು. ಹಾಗೂ ಯಾವುದೇ ರೀತಿಯ ಎಲೆಕ್ಟಾçನಿಕ್ ಮತ್ತು ಡಿಜಿಟಲ್ ವಾಚು, ವಸ್ತುಗಳಿಗೆ ಪ್ರವೇಶವಿಲ್ಲ. ಅಭ್ಯರ್ಥಿಗಳು ಧರಿಸುವ ಮೆಟಲ್ ಆಭರಣಗಳು, ವಸ್ತçಸಂಹಿತೆ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದು, ಸೂಕ್ಷö್ಮವಾಗಿ ತಮ್ಮ ವಿವೇಚನೆ ಮತ್ತು ನಿಯಮಗಳನ್ವಯ ಈ ಕುರಿತು ನಿರ್ವಹಣೆ ಮಾಡಿ ಪರೀಕ್ಷೆಗಳು ಶಾಂತಿಯುತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಕಲಚೇತನ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ನೆಲ ಮಾಳಿಗೆಯಲ್ಲಿ ಪರೀಕ್ಷೆಗೆ ಅವಕಾಶ ಮಾಡಿ ಅವರಿಗೆ ನಿಯಮಾನುಸಾರ ಇರುವ ಸೌಲಭ್ಯಗಳನ್ನು ನೀಡಬೇಕು. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳಿಗೆ ಈಗಾಗಲೇ ಎಲ್ಲ ರೀತಿಯ ಸೂಚನೆಗಳನ್ನು ನೀಡಿದ್ದು, ಸಂಬAಧಿಸಿದ ಅಧಿಕಾರಿಗಳು ಪರೀಕ್ಷೆಗಳು ಶಾಂತಿ ಮತ್ತು ಸುವ್ಯಸ್ಥಿತವಾಗಿ ನಡೆಯುವಂತೆ ಕ್ರಮ ವಹಿಸಿ ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಪಾಲ್ಗೊಂಡಿದ್ದರು.
Shimoga News ಜನವರಿ 11. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಕಲ ಸಿದ್ಧತೆ-ವಿ.ಅಭಿಷೇಕ್.
Date:
