Thursday, March 19, 2026
Thursday, March 19, 2026

Adichunchanagiri ಜನವರಿ13 ರಿಂದ 18 . ಶ್ರೀಆದಿಚುಂಚನಗಿರಿ ಮಠದಲ್ಲಿ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಮತ್ತು ಧಾರ್ಮಿಕ ವಿಚಾರಗೋಷ್ಠಿ.

Date:

Adichunchanagiri ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಗಳವರು ಜನಸಾಮಾನ್ಯರ ಉದ್ಧಾರಕ್ಕಾಗಿ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಆಕಳು, ಪರಿಸರ ಮುಂತಾದ ಕ್ಷೇತ್ರಗಳಲ್ಲಿ ಆಂದೋಲನವನ್ನೇ ಮಾಡಿದರು. ಶೈಕ್ಷಣಿಕ,ಧಾರ್ಮಿಕ ಹಾಗೂ ಸಮಾಜ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.
ಪರಮ ಪೂಜ್ಯರ ಅವಿಶ್ರಾಂತ ಕಾಯಕದ ಫಲವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಅಡಿಯಲ್ಲಿ 475 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳು ಸ್ಥಾಪನೆಗೊಂಡಿದ್ದು, ಶಿಕ್ಜ್ಹಣ ಸಂಸ್ಥೆಗಳಲ್ಲಿ ಒಂದು ಲಕ್ಷದ ಅರವತ್ತು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕ ಶಾಲೆಯಿಂದ ಸಂಸ್ಕೃತ ವೇದಾಗಮ ಹಾಗೂ ತಾಂತ್ರಿಕ, ವೈದ್ಯಕೀಯ ವಿಜ್ಞಾನದ ವರಗೆ ಯಾವುದೇ ಜಾತಿ, ಮತ, ಲಿಂಗ ಭೇದ ವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ.
Adichunchanagiri ಶ್ರೀ ಮಠದ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು:
ಜನವರಿ 13ರಿಂದ 18ರ ವರೆಗೆ 13ನೇ ಸಂಸ್ಮರಣಾ ಮಹೋತ್ಸವ ನಡೆಯಲಿದ್ದು,ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದ್ದು, 13.1.2026 ರಂದು ಮಂಗಳವಾರ ಹೋಮ, ಹವನಾದಿ,ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ, 14.1.2026ರ ಬುಧುವಾರ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳ ಕಾರ್ಯಗಾರ,15.1.2026 ಗುರುವಾರ ಹಿರಿಯ ವಿದ್ಯಾರ್ಥಿಗಳ ಸಂಗಮ,ಸನ್ಮಾನ ಸಮಾರಂಭ, 16.1.2026,ಶುಕ್ರವಾರ ದಂದು ರಾಜ್ಯ ಮಟ್ಟದ ಮಕ್ಜಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. 17.1.2026, ಶನಿವಾರ ರಾಜ್ಯ ಮಟ್ಟದ ಚುಂಚಾದ್ರಿ ಮಹಿಳಾ ಸಮಾವೇಶ, 18.1.2026,ರಂದು ಭಾನುವಾರ ಜಯಂತ್ಯುತ್ಸವ ಹಾಗೂ ಸಂತ ಭಕ್ತ – ಸಂಗಮ ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮ ಜೊತೆಗೆ ಪ್ರತಿದಿನ ಗೀತಗಾಯನ ಹಮ್ಮಿಕೊಳ್ಳಲಾಗಿದೆ, ವಿಶಿಷ್ಟ ವಿನೂತನ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಗುವುದು. ಅಂದು ನಾಡಿನ ಸಾಧು ಸಂತರು, ಗಣ್ಯ ವ್ಯಕ್ತಿಗಳು, ಶ್ರೀಮಠದ ಸದ್ಭಕ್ತರು, ಪರಮ ಪೂಜ್ಯರ ಶಿಷ್ಯ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು
ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...