Monday, February 2, 2026
Monday, February 2, 2026

IMA KARNATAKA ಆನಂದಗಳಲ್ಲಿ ಆತ್ಮಾನಂದವೇ ಬದುಕಿಗೆ ಮುಖ್ಯವಾಗಿದೆ- ಡಾ.ಕೆ.ಪಿ.ಪುತ್ತೂರಾಯ.

Date:

IMA KARNATAKA ಮನುಷ್ಯ ಆತ್ಮತೃಪ್ತಿ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುವುದರಿಂದ ಜೀವನ ಸಾರ್ಥಕ ಆಗುತ್ತದೆ ಎಂದು ವೈದ್ಯ, ಬರಹಗಾರ ಡಾ. ಕೆ.ಪಿ.ಪುತ್ತುರಾಯ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಘಟಕದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂತಸದಿಂದ ಇರುವುದ ಹೇಗೆ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಆನಂದಗಳಲ್ಲಿ ಮೂರು ವಿಧ ಇದ್ದು, ದೈಹಿಕ ಆನಂದ, ಚಿದಾನಂದ ಮತ್ತು ಆತ್ಮಾನಂದ ಆಗಿದ್ದು, ಆತ್ಮಾನಂದವೇ ಬದುಕಿಗೆ ಮುಖ್ಯವಾಗಿದೆ. ಅದನ್ನು ಸಾಧಿಸಿದಾಗ ಜೀವನ ಸಾರ್ಥಕ ಎನಿಸುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಐಎಂಎ ಶಿವಮೊಗ್ಗದಲ್ಲಿ “ಪರಿಸರ ವೈದ್ಯರಾಗಿ” ಕೆಲಸ ಮಾಡುವ ಉದ್ದೇಶದಿಂದ “ಐಎಂಎ ಎನ್ವಿರಾನ್‌ಮೆಂಟ್ ಕ್ಲಬ್” ಉದ್ಘಾಟಿಸಲಾಯಿತು. ಡಾ. ರತ್ನಾಕರ್ ಮತ್ತು ಡಾ. ಪ್ರೀತಿ ಪೈ ಅವರು ಸಂಯೋಜಕರಾಗಿ, ವೈದ್ಯರ ಕ್ಲಬ್‌ನಿಂದ ವಿವಿಧ ಪರಿಸರ ಸಂರಕ್ಷಿಸುವ ಕಾರ್ಯಕ್ರಮಗಳನ್ನು ಭಾರತೀಯ ವೈದ್ಯಕೀಯ ಸಂಘದಿಂದ ಆಯೋಜಿಸಲಿದೆ.

ವಾಯುಮಾಲಿನ್ಯ, ಅಶುದ್ಧ ನೀರು, ಹವಾಮಾನ ಬದಲಾವಣೆ, ಶಬ್ದ ಮಾಲಿನ್ಯ ಹಾಗೂ ರಾಸಾಯನಿಕಗಳಿಂದ ಉಸಿರಾಟದ ರೋಗಗಳು, ಹೃದಯ ರೋಗಗಳು, ಕ್ಯಾನ್ಸರ್, ಅಲರ್ಜಿಗಳು ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ವೈದ್ಯರು ಪ್ರತಿದಿನ ಈ ಪರಿಣಾಮಗಳಿಗೆ ಚಿಕಿತ್ಸೆ ನೀಡುತ್ತಾರೆ. ಕಾರಣವನ್ನು ತಡೆಯುವುದೂ ಸಹ ವೈದ್ಯಕೀಯ ಕರ್ತವ್ಯವೇ ಆಗಿರುತ್ತದೆ.

IMA KARNATAKA ಪರಿಸರ ಸಂರಕ್ಷಣೆಯು ಆರೋಗ್ಯದ ಪ್ರಾಥಮಿಕ ಅಂಶ ಮಾಲಿನ್ಯ ತಡೆಗಟ್ಟುವುದು. ಶುದ್ಧ ಗಾಳಿ, ಸುರಕ್ಷಿತ ನೀರು, ಹಸಿರು ವಾತಾವರಣ ಮತ್ತು ಕಡಿಮೆ ತ್ಯಾಜ್ಯವು ಅನೇಕ ರೋಗಗಳನ್ನು ತಡೆಯಬಹುದು. ಇದರಿಂದ ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವೂ ಕಡಿಮೆಯಾಗಲಿದೆ.

ಇದೇ ಸಂದರ್ಭದಲ್ಲಿ ಡಾ. ವಿನಯಾ ಶ್ರೀನಿವಾಸ್ ಅವರ ಸಂಪಾದಕತ್ವದಲ್ಲಿ “ಐಎಂಎ ಶಿವಮೊಗ್ಗ ಪಲ್ಸ್” ನಿಯತಕಾಲಿಕ ಬಿಡುಗಡೆ ಆಯಿತು. ಕಾರ್ಯಕ್ರಮದಲ್ಲಿ ಐಎಂಎ ಶಿವಮೊಗ್ಗ ಘಟಕದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಖಜಾಂಚಿ ಡಾ. ಎಚ್.ಎಲ್.ಶಶಿಧರ, ಮಹಿಳಾ ಘಟಕದ ಅಧ್ಯಕ್ಷೆ ಡಾ. ಕೌಸ್ತುಭ ಅರುಣ್, ಡಾ. ಜೀವಂತಿ, ಡಾ. ಪ್ರೀತಿ ಪೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...