Sunday, February 1, 2026
Sunday, February 1, 2026

Madhu Bangarappa ಇನ್ಮುಂದೆ ಹೊಳೆಹೊನ್ನೂರು, ಶಿಕಾರಿಪುರ ಆನವಟ್ಟಿಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಪ್ರಸ್ತಾವನೆ – ಮಧು ಬಂಗಾರಪ್ಪ.

Date:

Madhu Bangarappa ಹಸಿವು ಮುಕ್ತ ಕರ್ನಾಟಕ ನಿರ್ಮಾಣ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವುದು. ನಗರ ಪ್ರದೇಶದ ಬಡವರಿಗೆ ಸಮತೋಲಿತ ಆಹಾರವನ್ನು ಒದಗಿಸುವ ಸದುದ್ದೇಶದಿಂದ ಆಡಳಿತಾರೂಢ ಸರ್ಕಾರವು ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ ವ್ಯವಸ್ಥೆಯನ್ನು ರೂಪಿಸಿ ಅನುಷ್ಟಾನಗೊಳಿಸಿದ್ದು, ದಿನನಿತ್ಯ ಸಹಸ್ರಾರು ಸಂಖ್ಯೆಯ ಜನಸಾಮಾನ್ಯರಿಗೆ ಅತಿ ಕಡಿಮೆ ದರದಲ್ಲಿ ಉತ್ತಮ ಊಟೋಪಹಾರ ಒದಗಿಸಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ವಿದ್ಯಾನಗರ ಮತ್ತು ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿದ ನಂತರ ಏರ್ಪಡಿಸಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸದರಿ ಯೋಜನೆಯು ಮಾದರಿ ಯೋಜನೆಯಾಗಿದ್ದು, ಇತ್ತೀಚೆಗೆ ಮತ್ತಷ್ಟು ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಮಂಜೂರಾತಿ ನೀಡಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ 12 ಇಂದಿರಾ ಕ್ಯಾಂಟೀನ್‌ಗಳು ಸಾರ್ವಜನಿಕ ಸೇವೆಗೆ ಮುಕ್ತವಾಗಿವೆ. ಹೊಳೆಹೊನ್ನೂರು, ಶಿಕಾರಿಪುರ ಮತ್ತು ಆನವಟ್ಟಿ ಕೇಂದ್ರಗಳಲ್ಲಿಯೂ ಶೀಘ್ರದಲ್ಲಿ ಆರಂಭಿಸಲು ದಿನಾಂಕ ನಿಗಧಿಪಡಿಸಲಾಗುವುದು. ಅಲ್ಲದೇ ನಗರದ ಜನನಿಬಿಡ ಸ್ಥಳಗಳಿದ್ದಲ್ಲಿ ಅವುಗಳನ್ನು ಗುರುತಿಸಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಅವುಗಳನ್ನು ಹಂತಹಂತವಾಗಿ ಆರಂಭಿಸಲು ವಿಶೇಷ ಗಮನಹರಿಸಲಾಗುವುದು ಎಂದರು.

ಈ ಯೋಜನೆಯ ಸಮರ್ಪಕ ಅನುಷ್ಟಾನದಿಂದಾಗಿ ಹಸಿದ ಒಡಲಿಗೆ ಅನ್ನ ದೊರೆತು ಅನೇಕ ಜನರ ಹಸಿವು ನೀಗಲಿದೆ. ಅಲ್ಲದೇ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲವಾಗಲಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ವಿತರಿಸಲಾಗುವ ಆಹಾರ ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳಬೇಕು. ನಗರದ ಮೆಗ್ಗಾನ್‌ ಆಸ್ಪತ್ರೆಗೆ ಪ್ರತಿದಿನ ಸಹಸ್ರಾರು ಸಂಖ್ಯೆಯ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿದ್ದು, ಅವರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆಹಾರ ದೊರೆತಲ್ಲಿ ಅನುಕೂಲವಾಗಲಿದೆ.

ಇದರಿಂದಾಗಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ ಎಂದರು.

Madhu Bangarappa ನಗರದ ಬಿ.ಹೆಚ್. ರಸ್ತೆಯಲ್ಲಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಹಾಗೂ ಸೈನ್ಸ್‌ ಕಾಲೇಜಿನ ವಿಶಾಲ ಪ್ರದೇಶದಲ್ಲಿ ಕೆ.ಪಿ.ಎಸ್. ಶಾಲೆಯನ್ನು ಆರಂಭಿಸಲು ಅಗತ್ಯವಿರುವ ಭೂಮಿಯನ್ನು ಪರಿಶೀಲಿಸಿದರು. ಇವುಗಳ ನಿರ್ಮಾಣಕ್ಕೆ ಹಣಕಾಸಿನ ಯಾವುದೆ ಅಡಚಣೆ ಇಲ್ಲ. ನೂತನ ಕಟ್ಟಡಗಳು ಹಾಗೂ ಅನೇಕ ಜನೋಪಯೋಗಿ ಕಾರ್ಯಕ್ರಮಗಳ ಉದ್ಘಾಟನೆಗೆ ಶೀಘ್ರದಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಕಾರ್ಯಕ್ರಮ ನಡೆಸುವ ಉದ್ದೇಶ ಹೊಂದಿರುವುದಾಗಿ ಅವರು ನುಡಿದರು.

ಮಕ್ಕಳಿಗೆ ಶಿಕ್ಷಣ ನೀಡುವುದು ಇಂದಿನ ತುರ್ತು ಅಗತ್ಯ ಕಾರ್ಯಕ್ರಮಗಳಲ್ಲಿ ಪ್ರಧಾನವಾದುದ್ದಾಗಿದೆ. ಶಿಕ್ಷಣ ನೀಡುವುದರಿಂದಾಗಿ ದೇಶದ ಪ್ರಗತಿ ಹಾಗೂ ಮುಂಚೂಣಿ ದೇಶಗಳಲ್ಲಿ ಗುರುತಿಸಲು ಸಾಧ್ಯವಾಗಲಿದೆ. ಎಲ್ಲರಿಗೂ ಸಮಾನತೆಯ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಆಶಯವಾಗಿದೆ. ಪ್ರಸಕ್ತ ಸಾಲಿನಲ್ಲಿ ನೂತನವಾಗಿ 50ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಈಗಾಗಲೇ ಮಂಜೂರಾತಿ ನೀಡಿದೆ. ಕಳೆದ ಸಾಲಿನಲ್ಲಿ 173 ಪ್ರೌಢಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿತ್ತು ಎಂದವರು ನುಡಿದರು.

ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕೊಳಚೆ ಪ್ರದೇಶಗಳಲ್ಲಿನ ಅರ್ಹ ಬಡ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಶೀಘ್ರದಲ್ಲಿ ನಗರದ 2000ಜನರಿಗೆ ಹಕ್ಕುಪತ್ರ ವಿತರಿಸಲು ಕಾರ್ಯಕ್ರಮ ರೂಪಿಸಲಾಗುವುದು. ಇದನ್ನು ಒಳಗೊಂಡಂತೆ ಸುಮಾರು 12000ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದಂತಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಪರಿಷತ್‌ ಸದಸ್ಯೆ ಶ್ರೀಮತಿ ಬಲ್ಕೀಸ್‌ ಬಾನು ಅವರು ಮಾತನಾಡಿ, ಈ ಸಾಮಾಜಿಕ ವ್ಯವಸ್ಥೆಯಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲುವಂತಾಗಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ಕಾರ್ಮಿಕರು, ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ರೂಪಿಸಿ ಅನುಷ್ಟಾನಗೊಳಿಸಿರುವುದು ಸಹಜವಾಗಿ ಎಲ್ಲರಲ್ಲೂ ಹರ್ಷವೆನಿಸಿದೆ ಎಂದರು.

ಮುಂದಿನ 15ದಿನಗಳೊಳಗಾಗಿ ಉಳಿದ ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜನಸಾಮಾನ್ಯರು ಈ ಕ್ಯಾಂಟೀನಿನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಮುಖಂಡರಾದ ಪ್ರಸನ್ನಕುಮಾರ್‌, ಕಲಗೋಡು ರತ್ನಾಕರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...