Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಇವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಆಯೋಜಿಸಿದ್ದ “ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ ಸಮಾರಂಭ ಹಾಗೂ ದಿII ಟಿ.ವಿ ನಾರಾಯಣ ಶಾಸ್ತ್ರಿಗಳ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ “ಜಿಲ್ಲಾ ಮಟ್ಟದ ಸ್ಕೌಟ್ಸ್ – ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ರ್ಯಾಲಿ” ಯನ್ನು ಸಚಿವ ಮಧು ಬಂಗಾರಪ್ಪನವರು ಉದ್ಘಾಟಿಸಿದರು.
Bharat Scouts and Guides ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕರಾದ ಶ್ರೀಮತಿ ಬಲ್ಕಿಶ್ ಬಾನು, ಮಾಜಿ ವಿಧಾನಪರಿಷತ್ ಶಾಸಕರಾದ ಶ್ರೀ ರುದ್ರೇಗೌಡ್ರು, ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್ ಸಿಂಧ್ಯ ಸೇರಿದಂತೆ ಹಲವು ಗಣ್ಯರು ಮತ್ತು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
