Western Ghats ಪಶ್ಚಿಮ ಘಟ್ಟವನ್ನು ಉಳಿಸುವುದು ಮತ್ತು ನದಿ ಕಣಿವೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದು ಪರಿಸರ ವಾದಿಗಳು ಮತ್ತು ಆತಂಕದಲ್ಲಿರುವ ಅಪಾರ ಕೃಷಿ ಕುಟುಂಬಗಳ ಸಮಾವೇಶವನ್ನು ಉದ್ದೇಶಿಸಿ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯಕ್ ಮಾತನಾಡಿದರು.
Western Ghats ಸೋಂದಾ ಸ್ವರ್ಣವಲ್ಲಿ ಶ್ರೀಗಳು ಹಾಗೂ ಮಲೆಮಠದ ಶ್ರೀಗಳ ಪಾವನ ಸಾನ್ನಿಧ್ಯದಲ್ಲಿ ನಡೆದ ಈ ಬೃಹತ್ ಸಮಾವೇಶದಲ್ಲಿ ‘ಪಶ್ಚಿಮ ಘಟ್ಟ ಉಳಿಸೋಣ, ನದಿ ಕಣಿವೆ ಸಂರಕ್ಷಿಸೋಣ’ ಎಂಬ ಘೋಷವಾಕ್ಯಗಳು ಮೊಳಗಿದವು. ನೈಸರ್ಗಿಕ ಸಮತೋಲನಕ್ಕೆ ಧಕ್ಕೆ ತರುವ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿರುವ ಆತಂಕವನ್ನು ಶಮನಗೊಳಿಸುವ ಅಗತ್ಯವಿದ್ದು, ಪರಿಸರ ರಕ್ಷಣೆಯ ಈ ಮಹತ್ವದ ಹೋರಾಟದಲ್ಲಿ ನಾನು ಸದಾ ನಿಮ್ಮೊಂದಿಗಿದ್ದೇನೆ ಎಂದು ಶಾಸಕ ಭೀಮಣ್ಣ ನಾಯಕ್ ಭರವಸೆ ನೀಡಿದರು.
