Thursday, June 18, 2026
Thursday, June 18, 2026

CM Siddharamaiah ನಾಡಿನ ಜನರೆಲ್ಲ ವಿವೇಕಾನಂದರ ಚಿಂತನೆಗಳನ್ನ ಅರಿತು ವಿವೇಕ ಬೆಳೆಸಿಕೊಳ್ಳಲಿ- ಸಿದ್ಧರಾಮಯ್ಯ

Date:

CM Siddharamaiah ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು..

ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ.

ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ.

CM Siddharamaiah ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸುವೆ ಎಂದು
ನಾಡಿನ ಯುವಜನತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಷ್ಟ್ರೀಯ ಯುವದಿನ ಶುಭಾಶಯಗಳನ್ನ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...