Sunday, August 2, 2026
Sunday, August 2, 2026

CM Siddharamaiah ನಾಡಿನ ಜನರೆಲ್ಲ ವಿವೇಕಾನಂದರ ಚಿಂತನೆಗಳನ್ನ ಅರಿತು ವಿವೇಕ ಬೆಳೆಸಿಕೊಳ್ಳಲಿ- ಸಿದ್ಧರಾಮಯ್ಯ

Date:

CM Siddharamaiah ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು..

ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ.

ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ.

CM Siddharamaiah ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸುವೆ ಎಂದು
ನಾಡಿನ ಯುವಜನತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಷ್ಟ್ರೀಯ ಯುವದಿನ ಶುಭಾಶಯಗಳನ್ನ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...