Lions Club Shimoga ಲಯನ್ಸ್ ಕ್ಲಬ್, ಶಿವಮೊಗ್ಗ ಆಪ್ಟಿಕಲ್ಸ್ ಹಾಗೂ ಪ್ರೆಸ್ ಟ್ರಸ್ಟ್ ಆಶ್ರಯದಲಿ ಮತ್ತು ಶಿವಮೊಗ್ಗ ಆಪ್ಟಿಕಲ್ಸ್ನ ನಂದೀಶ್ ಎನ್.ಟಿ. ಅವರ ಮಾರ್ಗದರ್ಶನದಲ್ಲಿ ಪತ್ರಕರ್ತರು ಮತ್ತು ಪತ್ರಿಕಾ ಸಿಬ್ಬಂಧಿಯವರಿಗಾಗಿ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ ಆಯೋಜಿಸಲಾಗಿತ್ತು.
ಟ್ರಸ್ಟ್ ಅಧ್ಯಕ್ಷ ಎನ್. ಮಂಜು ನಾಥ್ ಅವರು ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರ ಆರೋಗ್ಯ ಕಾಪಾಡುವ ಉದ್ದೇಶ ದಿಂದ ಇಂತಹ ಸೇವಾ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿರುವುದು ಸಾಕಷ್ಟು ಅನುಕೂಲಕರ ಎಂದ ಅವರು, ಶಿವಮೊಗ್ಗ ಆಪ್ಟಿಕಲ್ಸ್ನ ನಂದೀಶ್ ಮತ್ತು ಲಯನ್ಸ್ ಕ್ಲಬ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿದರು.
ಸಮಾಜದ ವಿವಿಧ ವರ್ಗಗಳಿಗೆ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿ ದವರಿಗೆ ಉಚಿತ ಕನ್ನಡಕ ವಿತರಣೆ ಮೂಲಕ ದೃಷ್ಟಿ ಸಂರಕ್ಷಣೆಗೆ ಲಯನ್ಸ್ ಕ್ಲಬ್ ನೀಡುತ್ತಿರುವ ಕೊಡುಗೆ ಅತ್ಯಂತ ಶ್ಲಾಘನೀಯವಾಗಿದೆ ಎಂದರು. ನಂದೀಶ್ ಎನ್.ಟಿ. ಅವರು ಮಾತನಾಡಿ, ಪತ್ರಕರ್ತರು ದಿನನಿತ್ಯ ಮೊಬೈಲ್, ಕಂಪ್ಯೂಟರ್ ಹಾಗೂ ಕಡಿಮೆ ಬೆಳಕಿನಲ್ಲಿ ಕೆಲಸ ಮಾಡುವು ದರಿಂದ ಕಣ್ಣಿನ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಸಮಾಜದ ಸಮಸ್ಯೆ ಗಳನ್ನು ಮೊದಲು ಗುರುತಿಸುವ ಪತ್ರಕರ್ತರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುವ ಪರಿಸ್ಥಿತಿ ಹೆಚ್ಚಾಗಿದೆ. ಅದಕ್ಕಾಗಿ ಪತ್ರಕರ್ತ ಬಂಧುಗಳಿಗೆ ವಿಶೇಷವಾಗಿ ಈ ನೇತ್ರ ಶಿಬಿರವನ್ನು ಆಯೋಜಿಸಲಾಗಿತ್ತು ಎಂದರು.
Lions Club Shimoga ಇದುವರೆಗೆ 25 ಕ್ಕೂ ಹೆಚ್ಚು ನೇತ್ರ ಶಿಬಿರಗಳನ್ನು ನಡೆಸಲಾಗಿದ್ದು, 4500ಕ್ಕೂ ಹೆಚ್ಚು ಮಂದಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ 3ಸಾವಿರಕ್ಕೂ ಹೆಚ್ಚು ಕನ್ನಡಕಗಳನ್ನು ವಿತರಿಸುವ ಗುರಿಯೊಂದಿಗೆ ಈ ಸೇವೆಯನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.
ಲಯನ್ ಅಧ್ಯಕ್ಷ ಶಿವರಾಂ, ಕಾರ್ಯದರ್ಶಿ ಕುಮಾರ್, ಡಾ. ಎಸ್.ಐ. ಬಿರಾದಾರ್, ಲಯನ್ಸ್ ಸದಸ್ಯರು ಹಾಗೂ ಶಿವಮೊಗ್ಗ ಆಪ್ಟಿಕಲ್ಸ್ ತಂಡದವರಿದ್ದರು.
