Department of School Education and Literacy ಸೊರಬ ತಾಲೂಕಿನ ತಲ್ಲೂರು ಗ್ರಾಮದ ಶ್ರೀ ಚಿರಂತಪ್ಪ ಇವರ ಮನೆಯಿಂದ ಸುಂಕಪ್ಪ ಇವರ ಮನೆವರೆಗೆ ಸುಮಾರು 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಗೆ ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪನವರು ನೆರವೇರಿಸಿದರು.
ಇದರೊಂದಿಗೆ ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೋಟಿಪುರ ಸೇವಾಲಾಲ್ ದೇವಸ್ಥಾನದಿಂದ ಪಿ.ಡಬ್ಲೂ.ಡಿ ಮುಖ್ಯ ರಸ್ತೆವರೆಗೆ ಸುಮಾರು 15 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಬಾಕ್ಸ್ ಚರಂಡಿ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಜನಪ್ರತಿನಿಧಿಗಳು ಹಾಗೂ ಮುಖಂಡರುಗಳೊಂದಿಗೆ ನೆರವೇರಿಸಿದರು.
