Tuesday, August 25, 2026
Tuesday, August 25, 2026

B.Y. Raghavendra ಎಲ್ಲಾ ವರ್ಗದವರ ಅಭ್ಯುದಯ ಮುಖ್ಯ- ಸಂಸದ ರಾಘವೇಂದ್ರ

Date:

B.Y. Raghavendra ಭದ್ರಾವತಿ ತಾಲೂಕಿನ ಅರಬಿಳಚಿ ಜಿ.ಪಂ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ 2024-25 ಮತ್ತು 2025-26ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ರವರೊಂದಿಗೆ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಭಾಭವನ, ಮರಾಠಾ ಸಮಾಜದ ಸಭಾಭವನ ಮತ್ತು ದೇವಾಂಗ ಸಮಾಜದ ಸಭಾಭವನ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು:

ಎಲ್ಲಾ ವರ್ಗದ ಜನರ ಅಭ್ಯುದಯ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಸಮುದಾಯ ಭವನಗಳು ಸದ್ಬಳಕೆಯಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದರು

B.Y. Raghavendra ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ ಜಗದೀಶ್, ಜಿ.ಪಂ ಮಾಜಿ ಸದಸ್ಯರಾದ ಶ್ರೀ ಶ್ರೀನಿವಾಸ್, ದಿಶಾ ಸಮಿತಿ ಸದಸ್ಯರಾದ ಶ್ರೀ ಗಿರೀಶ್ ಭದ್ರಾಪುರ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಶ್ರೀ ರಾಜು ತಲ್ಲೂರು,ಮರಾಠ ಸಮಾಜದ ಅಧ್ಯಕ್ಷರಾದ ಶ್ರೀ ರುದ್ರೋಜಿ ರಾವ್, ತಾ.ಪಂ ಮಾಜಿ ಸದಸ್ಯರಾದ ಶ್ರೀ ನಾಗರಾಜಪ್ಪ ನವರು, ದೇವಾಂಗ ಸಮಾಜದ ಅಧ್ಯಕ್ಷರಾದ ಶ್ರೀ ನಾಗೇಂದ್ರ, ಉಪ್ಪಾರ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಖಾ ಭೋಸ್ಲೆ, ಅರಬೀಳಚಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರುದ್ರೋಜಿ, ಸಿದ್ದಪ್ಪ, ಉಜಿನಪ್ಪ ಸೇರಿದಂತೆ ಅನೇಕ ಗಣ್ಯರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...