Sunday, August 2, 2026
Sunday, August 2, 2026

Dinesh Gundu Rao ನರಮಂಡಲ ಕಾಯಿಲೆ “ಗಿಲೆನ್ ಬಾರಿ” ಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ- ಸಚಿವ ದಿನೇಶ್ ಗುಂಡೂರಾವ್.

Date:

Dinesh Gundu Rao ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ,

  • ದುಬಾರಿ ಚಿಕಿತ್ಸೆಗೆ ಸರ್ಕಾರಿ ಸವಲತ್ತು: ಈ ಹಿಂದೆ ಜಿ.ಬಿ.ಎಸ್ ಕಾಯಿಲೆಗೆ ನೀಡಲಾಗುತ್ತಿದ್ದ ಮೂಲ ಚಿಕಿತ್ಸೆಯ ಜೊತೆಗೆ, ಈಗ ಅತ್ಯಗತ್ಯವಾದ IVIG ಥೆರಪಿಯನ್ನೂ ಯೋಜನೆಯಡಿ ತರಲಾಗಿದೆ. ಇದಕ್ಕಾಗಿ ವಿಶೇಷ ಪ್ರೊಸೀಜರ್ ಕೋಡ್‌ಗಳನ್ನು (2B.M1.00061D ಮತ್ತು 2B.M1.00061E) ನಿಗದಿಪಡಿಸಲಾಗಿದೆ.
  • ಚಿಕಿತ್ಸಾ ವೆಚ್ಚ ಮತ್ತು ಮಿತಿ: ಪ್ರತಿ ರೋಗಿಗೆ ಗರಿಷ್ಠ 2 ಲಕ್ಷ ರೂಪಾಯಿಗಳವರೆಗೆ ಈ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಔಷಧಿಯ ದರವನ್ನು ಪ್ರತಿ ಗ್ರಾಂಗೆ 2,000 ರೂಪಾಯಿಗಳಂತೆ ನಿಗದಿಪಡಿಸಲಾಗಿದ್ದು, ರೋಗಿಯ ತೂಕದ ಆಧಾರದ ಮೇಲೆ ಡೋಸೇಜ್ ನೀಡಲು ಸೂಚಿಸಲಾಗಿದೆ.
  • ಪಾರದರ್ಶಕತೆಗೆ ಆದ್ಯತೆ: ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆಸ್ಪತ್ರೆಗಳು ಚಿಕಿತ್ಸೆ ನೀಡುವಾಗ ಔಷಧದ ಬಾಟಲಿ (Vial), ಅದರ ಬ್ಯಾಚ್ ಸಂಖ್ಯೆ, ರೋಗಿಯ ಹೆಸರಿರುವ ಫೋಟೋ ಹಾಗೂ ವೈದ್ಯರು ದೃಢೀಕರಿಸಿದ ಡೋಸೇಜ್ ಪಟ್ಟಿಯನ್ನು ಕಡ್ಡಾಯವಾಗಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಸೂಚಿಸಲಾಗಿದೆ.
  • ಎಲ್ಲಾ ಆಸ್ಪತ್ರೆಗಳಿಗೆ ಅನ್ವಯ: ಈ ಸೌಲಭ್ಯವು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಯೋಜನೆಯಡಿ ನೋಂದಾಯಿತವಾಗಿರುವ (Empanelled) ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರಲಿದೆ.
    ಬಡ ಮತ್ತು ಸಾಮಾನ್ಯ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ನರರೋಗಕ್ಕೆ ಸಂಬಂಧಿಸಿದ ಈ ಕಠಿಣ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವುದರಿಂದ ಸಾವಿರಾರು ರೋಗಿಗಳಿಗೆ ಅನುಕೂಲವಾಗಲಿದೆ.

Dinesh Gundu Rao ಬಡ ಮತ್ತು ಸಾಮಾನ್ಯ ವರ್ಗದ ರೋಗಿಗಳಿಗೆ ಸಾವಿರಾರು ರೂಪಾಯಿ ವೆಚ್ಚದ ಈ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸುವ ಮೂಲಕ ಅವರ ಬದುಕಿಗೆ ಆಸರೆಯಾಗುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...