Rotary Club Shimoga ವೃತ್ತಿಯಲ್ಲಿ ಉನ್ನತ ಸಾಧನೆ ಮಾಡುವ ಜತೆಯಲ್ಲಿ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಳ್ಳುವುದು ಅವಶ್ಯಕ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ಕುಮಾರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಸಹ್ಯಾದ್ರಿ ಸಂಸ್ಥೆ, ಸಂಜೀವಿನಿ ರಕ್ತನಿಧಿ ಸಂಸ್ಥೆ ಮತ್ತು ನೆಪ್ಚೂನ್ ಮಾರುತಿ ಆಟೋ ವರ್ಕ್ಸ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ರೋಟರಿ ಸಂಸ್ಥೆಯು ವಿಶ್ವಾದ್ಯಂತ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಬಿ.ಎನ್.ಸಂತೋಷ್ಕುಮಾರ್ ಮಾತನಾಡಿ, ರೋಟರಿ ಸಂಸ್ಥೆ ಜತೆ ಜೆಸಿಐ ಕೈಜೋಡಿಸಿ ಹಲವಾರು ಕಾರ್ಯಕ್ರಮ ಕೈಗೊಳ್ಳುತ್ತೇವೆ. ರಕ್ತದಾನ ಪ್ರಕ್ರಿಯೆಯು ಅತ್ಯಂತ ಶ್ರೇಷ್ಠ ದಾನ ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪಾದನೆ ಜತೆಗೆ ಕೊಬ್ಬಿನಾಂಶ ಕಡಿಮೆಯಾಗಿ ಸದೃಢ ಆರೋಗ್ಯ ನಮ್ಮದಾಗುತ್ತದೆ. ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಜನರಲ್ಲಿ ಅರಿವು ಮೂಡುತ್ತದೆ ಎಂದು ತಿಳಿಸಿದರು.
Rotary Club Shimoga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ ರಾಂಪುರ ಮಾತನಾಡಿ, ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ತುರ್ತು ಸಂದರ್ಭದಲ್ಲಿ ಇನ್ನೊಬ್ಬ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದರು.
ನೆಪ್ಚೂನ್ ಸಂಸ್ಥೆಯ ಮಾಲೀಕರಾದ ಕಿಶೋರ್ಕುಮಾರ್, ಗೋಪಾಲ್ನಾಯಕ್, ಎಂ.ಎಲ್.ಗುರುರಾಜ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಮಾಜಿ ಅಧ್ಯಕ್ಷ ಗಣೇಶ್, ರೋಟರಿ ಮಾಜಿ ಅಧ್ಯಕ್ಷರಾದ ಸತೀಶ್ ಚಂದ್ರ, ಸಂಜೀವಿನಿ ಸಂಸ್ಥೆ ಸಿಬ್ಬಂದಿ ಇತರರಿದ್ದರು
