Thursday, March 19, 2026
Thursday, March 19, 2026

Sahitya Akademi “ಸ್ವಾತಂತ್ರ್ಯದ ಓಟ” ಕಾದಂಬರಿಯ ನಾಟಕ ರೂಪದಲ್ಲಿ ಅಭಿನಯಿಸಲು ಕಲಾವಿದರಿಂದ ಅರ್ಜಿ ಆಹ್ವಾನ

Date:

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ಸ್ವಾತಂತ್ರ್ಯದ ಓಟ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಈ ಯೋಜನೆಗೆ 2026 ರ ಫೆಬ್ರವರಿಯಿಂದ 2026 ರ ಜೂನ್‌ವರೆಗೆ ಐದು ತಿಂಗಳ ಅವಧಿಗೆ ರೆಪರ್ಟರಿ ಕಲಾವಿದರಲ್ಲದೇ 15 ಜನ ಆಸಕ್ತ ಹಾಗೂ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜ. 28 ರವರೆಗೆ ವಿಸ್ತರಿಸಲಾಗಿದೆ.
ಕಲಾವಿದರ ವಯಸ್ಸು ಕನಿಷ್ಟ 20 ರಿಂದ ಗರಿಷ್ಟ 40 ಇರಬೇಕು. ಆಯ್ಕೆಯಾದ ಕಲಾವಿದರಿಗೆ ಮಾಹೆಯಾನ ರೂ.22 ಸಾವಿರ ಗೌರವ ಸಂಭಾವನೆ, ಊಟ, ಉಪಹಾರ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಯೋಜನೆಯು 5 ತಿಂಗಳ ಅವಧಿಯಾಗಿದ್ದು ಅರ್ಜಿ ಸಲ್ಲಿಸಲು ಜ.28 ಕಡೆಯ ದಿನವಾಗಿರುತ್ತದೆ. ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿಗೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಕಳುಹಿಸಬಹುದಾಗಿದೆ.
Sahitya Akademi ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353, 7975229166 ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿಯೊಂದಿಗೆ ತಮ್ಮ ಇತ್ತೀಚಿನ ಭಾವಚಿತ್ರ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ರಂಗಭೂಮಿ ಅನುಭವದ ವಿವರ, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಬೇಕೆಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...