Thursday, March 19, 2026
Thursday, March 19, 2026

Shimoga-Bhadravati Urban Development Authority ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯ ಕೆರೆಗಳು & ಪಾರ್ಕುಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದೆ- ಹೆಚ್.ಎಸ್.ಸುಂದರೇಶ್

Date:

ಶಿವಮೊಗ್ಗ ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.
ಸೋಮವಾರ ನಗರದ ಸಾಗರ ರಸ್ತೆಯ ಕೊಡಚಾದ್ರಿ ಬಡಾವಣೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಹಾಗೂ ಶರಾವತಿ ಡೆಂಟಲ್ ಕಾಲೇಜ್ ಬಳಿಯ ಗೋಲ್ಡನ್ ಸಿಟಿ ಬಡಾವಣೆಯಲ್ಲಿ ಓಪನ್ ಜಿಮ್ ಉದ್ಘಾಟಿಸಿ ಅವರು ಮಾತನಾಡಿದರು.
ಸಾಗರ ರಸ್ತೆಯ ಕೊಡಚಾದ್ರಿ ಬಡಾವಣೆಯಲ್ಲಿ ನೂತನವಾಗಿ ರೂ.25 ಲಕ್ಷ ಮೊತ್ತದಲ್ಲಿ ಪಾರ್ಕ್ ಅಭಿವೃದ್ದಿ ಮತ್ತು ರೂ.25 ಲಕ್ಷದಲ್ಲಿ ರಸ್ತೆ ಅಭಿವೃದ್ದಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಹಾಗೂ ಶರಾವತಿ ಡೆಂಟಲ್ ಕಾಲೇಜ್ ಬಳಿಯ ಗೋಲ್ಡನ್ ಸಿಟಿ ಬಡಾವಣೆಯಲ್ಲಿ ರೂ.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಓಪನ್ ಜಿಮ್ ಉದ್ಘಾಟಿಸಲಾಗಿದ್ದು ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಇತ್ತೀಚೆಗೆ ಮಲೆನಾಡಿನ ಸೊಬಗು ಮರೆಯಾಗುತ್ತಿದ್ದು, ಉಷ್ಣಾಂಶ ಹೆಚ್ಚುತ್ತಿದೆ. ಆದ್ದರಿಂದ ನಗರದಲ್ಲಿ ಗಿಡಗಳನ್ನು ನೆಡುವುದು, ಪಾರ್ಕ್ ಅಭಿವೃದ್ದಿ ಪಡಿಸುವುದು ಅತ್ಯವಶ್ಯಕವಾಗಿದೆ. ಕಳೆದ ಬಾರಿ ವಾಜಪೇಯಿ ಬಡಾವಣೆಯಲ್ಲಿ 3 ಸಾವಿರ ಗಿಡಗಳನ್ನು ನೆಡಲಾಗಿತ್ತು. ಈ ಬಾರಿ ನಗರದಲ್ಲಿ 5 ಸಾವಿರ ಗಿಡಗಳನ್ನು ನೆಡುವ ಬಗ್ಗೆ ಅರಣ್ಯ ಇಲಾಖೆಯೊಂದಿಗೆ ಮಾತನಾಡಿದ್ದೇನೆ. ನಗರನ್ನು ಹಸಿರಾಗಿಡಲು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಈಗಾಗಲೇ 50 ಪಾರ್ಕ್ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ 50 ಪಾರ್ಕ್ಗಳನ್ನು ಅಭಿವೃದ್ದಿಪಡಿಸಿ, ಉದ್ಘಾಟನೆ ಮಾಡಲಾಗುತ್ತಿದೆ. ಶಿವಮೊಗ್ಗ ನಗರ ತನ್ನದೇ ಆದ ಇತಿಹಾಸ ಹೊಂದಿದ್ದು, ಎಲ್ಲ ಮೂಲಭೂತ ಸೌಕರ್ಯ ಇರುವುದರಿಂದ ಹೂಡಿಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಇಂತಹ ನಗರವನ್ನು ನಾವು ಸುಂದರವಾಗಿ ಮತ್ತು ಹಸಿರಾಗಿ ಇಟ್ಟುಕೊಳ್ಳಬೇಕು. ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಗಿಡಗಳನ್ನು ನೆಡಬೇಕು ಎಂದರು.
ಶಿವಮೊಗ್ಗ-ಭದ್ರಾವತಿ ವ್ಯಾಪ್ತಿಯಲ್ಲಿ ರೂ.50 ಕೋಟಿ ವೆಚ್ಚದಲ್ಲಿ 22 ಕೆರೆಗಳನ್ನು ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು. 12 ಕೆರೆ ಅಭಿವೃದ್ದಿಗೆ ಈಗಾಗಲೇ ಟೆಂಡರ್ ಆಗಿದೆ. ವಾಕಿಂಗ್ ಪಾಥ್, ಮಕ್ಕಳ ಆಟಿಕೆಗಳು, ಫೆನ್ಸ್, ಲೈಟ್, ಐಲ್ಯಾಂಡ್ ನಿರ್ಮಾಣ ಸೇರಿದಂತೆ ಅತ್ಯಂತ ಸುಂದರವಾಗಿ ಕೆರೆಗಳನ್ನು ಅಭಿವೃದ್ದಿಸಲು ಯೋಜನೆ ರೂಪಿಸಲಾಗಿದೆ.
ನಗರದಲ್ಲಿ ಇತ್ತೀಚೆಗೆ ನಿವೇಶನಗಳು ಸಿಗುವುದು ಬಹಳ ಕಷ್ಟವಾಗಿರುವ ಕಾರಣ ನಗರ ವ್ಯಾಪ್ತಿಯಲ್ಲಿ ಸುಮಾರು 1000 ಅಪಾರ್ಟ್ಮೆಂಟ್ ನಿರ್ಮಾಣ ಮಾಡಿ ಜನರಿಗೆ ನೀಡಲು ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಹಾಗೂ ಜನರಿಗೆ ಕಡಿಮೆ ಬೆಲೆಯಲ್ಲಿ ನಿವೇಶನ ನೀಡುವ ಉದ್ದೇಶದಿಂದ ಗೋಪಿಶೆಟ್ಟಿಕೊಪ್ಪದಲ್ಲಿ 33 ಎಕರೆಯನ್ನು ರೈತರಿಂದ ಖರೀದಿಸಿ ನಿವೇಶನ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
Shimoga-Bhadravati Urban Development Authority ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಬಡಾವಣೆಗಳ ನಿವಾಸಿಗಳು ಕೋರಿರುವಂತೆ ಬಡಾವಣೆಗಳಲ್ಲಿನ ರಸ್ತೆ ಮರು ಡಾಂಬರೀಕರಣ, ಪಾರ್ಕ್ ಅಭಿವೃದ್ದಿ, ಸಮುದಾಯ ಭವನ ನಿರ್ಮಾಣ ಇತರೆ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಅವರು ಪ್ರಸ್ತುತ ಇರುವ ಓಪನ್ ಜಿಮ್, ಪಾರ್ಕ್ ಇತರೆ ಸೌಲಭ್ಯಗಳನ್ನು ನಿವಾಸಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಎಇಇ ಬಸವರಾಪ್ಪ, ಎಇಇ ಗಂಗಾಧರಸ್ವಾಮಿ, ಟಿಪಿಎಂ ಅಭಿಲಾಷ್, ಸೂಡಾ ಮಾಜಿ ಅಧ್ಯಕ್ಷರಾದ ಜ್ಞಾನೇಶ್ವರ್, ನಾಗರಾಜ್, ಮಣಿ, ದೇವೇಂದ್ರಪ್ಪ, ಚಂದ್ರಶೇಖರ್, ಬಡಾವಣೆಗಳ ನಿವಾಸಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...