Tuesday, August 11, 2026
Tuesday, August 11, 2026

Pradhan Mantri Shramayogi Man-Dhan Yojana ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ

Date:

Pradhan Mantri Shramayogi Man-Dhan Yojana ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
Pradhan Mantri Shramayogi Man-Dhan Yojana ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...