Thursday, June 18, 2026
Thursday, June 18, 2026

ಜನವರಿ 25ರಂದು ‘ಗ್ಲೋಬಲ್ ಉತ್ಸವ–2026’ ವೈಭವ

Date:

ಮಾಲ್ನಾಡ್ ಎಜುಕೇಶನಲ್ & ಚಾರಿಟಬಲ್ ಟ್ರಸ್ಟ್ (ಆರ್) ಹಾಗೂ ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ‘ಗ್ಲೋಬಲ್ ಉತ್ಸವ–2026’ ಕಾರ್ಯಕ್ರಮವು ಜನವರಿ 25, ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಹರ್ಷ ದ ಫರ್ನ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಪಥ ಸ್ವೀಕಾರ ಸಮಾರಂಭ (Oath Taking Ceremony), ವೈಟ್ ಕೋಟ್ ಸೆರೆಮನಿ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹಮದ್ ಅವರು ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಶೋಭೆ ತರಲಿದ್ದಾರೆ.
ಗೌರವ ಅತಿಥಿಗಳಾಗಿ ಮಾಲ್ನಾಡ್ ಎಜುಕೇಶನಲ್ & ಚಾರಿಟಬಲ್ ಟ್ರಸ್ಟ್ (ಆರ್) ಅಧ್ಯಕ್ಷರಾದ ಕೆ.ಬಿ. ಬಶೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ವಿ. ಯೋಗರಾಜ ಗೌಡ, ಡಾ. ಧನಂಜಯ ಸರ್ಜೀ, ಬಲ್ಕೀಸ್ ಬಾನು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಸುಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಸೋನಾ ಗ್ರೂಪ್ಸ್ ವ್ಯವಸ್ಥಾಪಕ ನಿರ್ದೇಶಕ ಅಲ್ ಹಾಜ್ ಇಕ್ಬಾಲ್ ಹಬೀಬ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಇರ್ಫಾನ್ ಅಹಮದ್ ಎಚ್.ಬಿ. (ಎಂಬಿಬಿಎಸ್, ಎಂಡಿ) ವಹಿಸಲಿದ್ದು, ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡುವ ಈ ಸಮಾರಂಭವು ಶಿಸ್ತು, ಮೌಲ್ಯ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಲಿದೆ ಎಂದು ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಇರ್ಫಾನ್ ಅಹಮದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...