Thursday, June 18, 2026
Thursday, June 18, 2026

ಸೈಲ್-ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Date:

ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ೨೬ನೇ ಜನವರಿ ೨೦೨೬ರಂದು ರಾಷ್ಟçದ ೭೭ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀಯುತ ಅನುಪ್ ಕುಮಾರ್ ಅವರು ರಾಷ್ಟçಧ್ವಜ ಅನಾವರಣ ಮಾಡಿದರು.

ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಭದ್ರಾವತಿಯ ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಲಿಟ್ಲಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಐಕ್ಯತೆ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು ಮತ್ತು ಸಮೂಹಗಾನ ಹಾಡಿದರು.

ವಿಐಎಸ್‌ಎಲ್ ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್, ನೆಹರು ಮತ್ತು ಡಾ|| ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಿಗೆ ಹಾಗೂ ಮಿಕ್ಕ ಎಲ್ಲಾ ಪಥಸಂಚಲನ ತಂಡಗಳಿಗೆ ಈ ಸಂದರ್ಭದಲ್ಲಿ ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು. ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು.

ಉಪ ಪ್ರಬಂಧಕರಾದ ಶ್ರೀ ಎಮ್. ಕೃಷ್ಣ, ಮತ್ತು ಆರ್. ಹರೀಶ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದ ಸಂಯೋಜನೆಯನ್ನು ಶ್ರೀ ನವೀನ್ ರಾಹುಲ್, ಉಪ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...