Monday, February 2, 2026
Monday, February 2, 2026

Bharat Scouts and Guides ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾದರಿ ನಮ್ಮ ಸಂವಿಧಾನ : ಶಕುಂತಲಾ ಚಂದ್ರಶೇಖರ್

Date:

Bharat Scouts and Guides ಭಾರತದ ಸಂವಿಧಾನ ಎಲ್ಲ ರಾಷ್ಟ್ರಗಳಿಗೂ ಮಾದರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.

ನಗರದ ಸ್ಕೌಟ್ಸ್ ಭವನದ ಆವರಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂವಿಧಾನದ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳಬೇಕು. ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಇಂದಿಗೂ ಸಹ ತುಂಬಾ ಪ್ರಸ್ತುತವಾಗಿದೆ. ನಮ್ಮ ದೇಶಕ್ಕಾಗಿ ದುಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ತಿಳಿಸಿದರು.

ಆಯುಕ್ತ ಕೆ.ರವಿ ಮಾತನಾಡಿ, ಮಕ್ಕಳಲ್ಲಿ ರಾಷ್ಟ್ರ ಪ್ರೇಮ ಹಾಗೂ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ. ನಮ್ಮ ರಾಷ್ಟ್ರ ಸುವ್ಯವಸ್ಥಿತವಾಗಿ ಆಡಳಿತ ನಡೆಯುತ್ತಿದೆ. ಇದಕ್ಕೆ ನಮ್ಮ ದೇಶದ ಸಂವಿಧಾನವೇ ಕಾರಣ. ಎಲ್ಲರೂ ಸಂವಿಧಾನವನ್ನು ಗೌರವಿಸೋಣ ಎಂದು ತಿಳಿಸಿದರು.

Bharat Scouts and Guides ಸಮಾರಂಭದಲ್ಲಿ ಮಕ್ಕಳಿಂದ ಪೆರೇಡ್ ಹಾಗೂ ಕವಾಯತು ನಡೆಯಿತು. ಸಮಾರಂಭದಲ್ಲಿ ಸ್ಕೌಟ್ಸ್ ಆಯುಕ್ತ ಎಸ್.ಜಿ.ಆನಂದ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಗೈಡ್ ಆಯುಕ್ತೆ ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ದೊರೆ, ಚೇತನ್ ರಾಯನಹಳ್ಳಿ, ಪರಮೇಶ್ವರ್, ಚುಡಾಮಣಿ ಪವಾರ್, ರುದ್ರಪ್ಪ ಚೀಲೂರ್, ಚಂದ್ರಶೇಖರ್, ಕೃಷ್ಣಸ್ವಾಮಿ, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...