ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಕಾಣಿಸಿಕೊಂಡಿದೆ.
ಕಳೆದ 3 ದಿನಗಳಿಂದ 14 ಮಕ್ಕಳು ನಿರಂತರ ಕೆಮ್ಮುತ್ತಿದ್ದ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿ.ಇ.ಓ., ಟಿ ಹೆಚ್ ಓ, ಆರೋಗ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
