Rotary Shivamogga ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುವ ಜತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಇತರರಿಗೂ ಪ್ರೇರಣೆಯಾಗುತ್ತದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರದಲ್ಲಿ ವೃತ್ತಿಪರರಿಗೆ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ವಿಶೇಷ ಸಾಧಕರಿಗೆ ವೃತ್ತಿ ಸೇವಾ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರಿಗೆ ಸಾಧನೆ ಮಾಡಲು ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗುತ್ತದೆ ಎಂದು ತಿಳಿಸಿದರು.
ವೃತ್ತಿಪರ ಸೇವಾ ನಿರ್ದೇಶಕ ಡಿ.ಕೆ.ಶೇಷಗಿರಿ ಮಾತನಾಡಿ, ವೃತ್ತಿ ಮತ್ತು ಕೌಶಲ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದ ಹಾಗೆ. ಅಂತರಾಷ್ಟ್ರೀಯ ಸಂಸ್ಥೆಯು ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಎಚ್.ಸುರೇಶ್, ನಂಜುಂಡ, ಅರಸು ನಾಯಕ್, ನಾಗರಾಜ, ಮೈಲಾರಿ, ಜಯಪಾಲ್, ಜಫ್ರುಲ್ಲಾ ಖಾನ್, ಪ್ರಹ್ಲಾದ್, ಮಂಜುನಾಥ್ ಅವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಮ್ಮನ್ನು ಗುರುತಿಸಿ ಸನ್ಮಾನಿಸಿರುವುದು ಬಹಳ ಸಂತಸದ ಸಂಗತಿ ಎಂದು ಸನ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ಕುಮಾರ್ ಮಾತನಾಡಿ, ಸೇವಾಕಾರ್ಯಗಳನ್ನು ನಮ್ಮ ಕ್ಲಬ್ನಿಂದ ಹಮ್ಮಿಕೊಂಡು ನಡೆಸುತ್ತಿದ್ದು, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಪ್ರೊ. ಧನಂಜಯ ಮಾತನಾಡಿ, ಸಾಮಾನ್ಯ ವೃತ್ತಿ ಮಾಡುವ ಸಾಧಕರನ್ನು ಗುರುತಿಸಿ ಗೌರವಿಸುವುದು ವಿಶೇಷ ಕಾರ್ಯ ಎಂದು ಹೇಳಿದರು.
Rotary Shivamogga ವೃತ್ತಿಪರ ಪ್ರಶಸ್ತಿ ಪ್ರದಾನ ಮುಖ್ಯಸ್ಥ ಸತೀಶ್ ಚಂದ್ರ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಚಂದ್ರಹಾಸ ಪಿ.ರಾಯ್ಕರ್, ಜಗದೀಶ್, ರವಿಶಂಕರ್, ಗಣೇಶ್, ಅಜಿತ್, ಡಾ. ಗುಡದಪ್ಪ ಕಸಬಿ, ರಘುರಾಜ್, ರವಿ ಪ್ರಕಾಶ್ ಜನ್ನೆ, ವೀಣಾ ಕಿಶೋರ್, ಗಿರಿಜಾ ಧನಂಜಯ ರಾಂಪುರ, ಪದ್ಮಿನಿ ವಸಂತ ಹೋಬಳಿದಾರ್, ಬಿಂದು ವಿಜಯಕುಮಾರ್, ಕೇಶವಪ್ಪ, ರಮೇಶ್ ಭಟ್, ಆದಿಮೂರ್ತಿ, ರೂಪಾ ಗುಡದಪ್ಪ ಕಸಬಿ ಮತ್ತಿತರರು ಉಪಸ್ಥಿತರಿದ್ದರು.
