Thursday, May 7, 2026
Thursday, May 7, 2026

Narayana Health Insurance ವೈದ್ಯಕೀಯ ಸಾಮರ್ಥ್ಯ ವೃದ್ಧಿಸುವ ಅಂಶಗಳಿರುವ ಬಜೆಟ್-ರವಿ ವಿಶ್ವನಾಥ್.

Date:

Narayana Health Insurance “ಈ ವರ್ಷದ ಬಜೆಟ್, ದೇಶದ ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಮತ್ತು ವಿಶೇಷ ವೈದ್ಯಕೀಯ ಸಾಮರ್ಥ್ಯವನ್ನು ವೃದ್ಧಿಸುವ ಸರ್ಕಾರದ ದೀರ್ಘಕಾಲೀನ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುವಂತೆ ಮೂಡಿಬಂದಿದೆ ಎಂದು ನಾರಾಯಣ ಹೆಲ್ತ್ ಇನ್ಶೂರೆನ್ಸ್ ನ ಮಂಡಳಿ ಸದಸ್ಯರು ಹಾಗೂ ನಿರ್ದೇಶಕರಾದ ರವಿ ವಿಶ್ವನಾಥ್ ಅವರು ತಿಳಿಸಿದ್ದಾರೆ.

ವಿಶೇಷವಾಗಿ 2025-26ರ ಸುಧಾರಣಾ ವೇಗವನ್ನು ಅದೇ ಆವೇಗದಲ್ಲಿ ಮುಂದುವರಿಸಲು ನೆರವಾಗಲಿದೆ. ಈ ಹೂಡಿಕೆಗಳು ಅತ್ಯಗತ್ಯವಾಗಿದ್ದರೂ, ಭಾರತದಲ್ಲಿ ಆರೋಗ್ಯ ವಿಮೆಯ ವ್ಯಾಪ್ತಿ ಇನ್ನೂ ಕಡಿಮೆ ಇದೆ. ಅನೇಕ ಉದ್ಯಮ ಅಂದಾಜಿನ ಪ್ರಕಾರ ಇದು ಜಿಡಿಪಿಯ 1%ಗಿಂತಲೂ ಕಡಿಮೆಯಿದೆ. ಅಲ್ಲದೇ, ರಾಷ್ಟ್ರೀಯ ಆರೋಗ್ಯ ಲೆಕ್ಕಪತ್ರ 2021-22ರ ಪ್ರಕಾರ, ಒಟ್ಟು ವೈದ್ಯಕೀಯ ವೆಚ್ಚದಲ್ಲಿ ಶೇ. 39.4ರಷ್ಟು ಹಣವನ್ನು ಜನರು ಇಂದಿಗೂ ತಮ್ಮ ಸ್ವಂತ ಉಳಿತಾಯದಿಂದಲೇ ಭರಿಸುತ್ತಿದ್ದಾರೆ.
ಒಂದು ಬೃಹತ್ ಆಸ್ಪತ್ರೆ ಸಮೂಹದ ಭಾಗವಾಗಿರುವ ವಿಮಾ ಸಂಸ್ಥೆಯ ದೃಷ್ಟಿಕೋನದಿಂದ ನೋಡುವುದಾದರೆ, ಉತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಿದ್ದರೂ ಸಹ, ಚಿಕಿತ್ಸೆ ವಿಳಂಬವಾಗಲು ಮತ್ತು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ಸೂಕ್ತವಾದ ಆರ್ಥಿಕ ರಕ್ಷಣೆಯ ಕೊರತೆಯೇ ಮುಖ್ಯ ಕಾರಣವಾಗಿದೆ ಎಂದಿದ್ದಾರೆ.

Narayana Health Insurance ಆರೋಗ್ಯ ರಕ್ಷಣಾ ಸಾಮರ್ಥ್ಯವು ಬೆಳೆಯುತ್ತಿರುವ ಈ ಸಂದರ್ಭದಲ್ಲಿ, ಮುಂದಿನ ಹಂತದ ಸುಧಾರಣೆಗಳು ವಿಮೆಯನ್ನು ಇನ್ನಷ್ಟು ಸರಳವಾಗಿ, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮತ್ತು ಚಿಕಿತ್ಸಾ ಪದ್ಧತಿಗೆ ಪೂರಕವಾಗಿರುವಂತೆ ಮಾಡುವತ್ತ ಗಮನ ಹರಿಸಬೇಕು. ಉತ್ತಮ ಆರೋಗ್ಯ ಚಿಕಿತ್ಸಾ ಫಲಿತಾಂಶಗಳನ್ನು ಪಡೆಯಲು, ಮನೆಮಂದಿಯ ಆರ್ಥಿಕ ಹೊರೆಯನ್ನು ತಗ್ಗಿಸಲು ಮತ್ತು ‘ಎಲ್ಲರಿಗೂ ವಿಮೆ’ ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸಲು ಆಸ್ಪತ್ರೆಗಳು ಮತ್ತು ವಿಮಾ ಸಂಸ್ಥೆಗಳ ನಡುವೆ ನಿಕಟ ಸಮನ್ವಯವು ಬಹಳ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...