Tuesday, August 25, 2026
Tuesday, August 25, 2026

Shivaganga Yoga Center ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮಗೊಳಿಸುತ್ತದೆ- ಡಾ.ಸಿ.ವಿ.ರುದ್ರಾರಾಧ್ಯ

Date:

Shivaganga Yoga Center ಯೋಗ ಮಾನಸಿಕ ಹಾಗೂ ದೈಹಿಕ ಸದೃಢತೆ ಜೊತೆಗೆ ದೀರ್ಘಾಯುಷ್ಯ ಉಳ್ಳವರಾಗಿ ಮಾಡುವುದರಲ್ಲಿ ಸಂದೇಹವಿಲ್ಲ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾಕ್ಟರ್ ಸಿ.ವಿ. ರುದ್ರಾರಾಧ್ಯ ನುಡಿದರು ಅವರು ಇಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆ ಹಾಗೂ ಶಿವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು ಸನಾತನ ಕಾಲದ ಯೋಗ ಇಂದಿಗೂ ಪ್ರಸ್ತುತ. ಪ್ರತಿನಿತ್ಯ ಕ್ರಮಬದ್ಧವಾಗಿ ಗುರು ಮುಖೇನ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಮಾಡುವುದರಿಂದ ಆರೋಗ್ಯದಿಂದ ಇರಲು ಸಾಧ್ಯ ಇದರಿಂದ ನಕಾರಾತ್ಮಕ ಭಾವನೆಗಳು ದೂರವಾಗುತ್ತವೆ ಜೊತೆಗೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಏಂದು ನುಡಿದ ಅವರು ಶಿವಗಂಗಾ ಯೋಗ ಕೇಂದ್ರದಲ್ಲಿ ನಡೆಯುವ ಶಿವರಾತ್ರಿ ಜಾಗರಣೆ, ಶಿವನ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಎಲ್ಲರೂ ತಪ್ಪದೆ ಭಾಗವಹಿಸಲು ಕರೆ ನೀಡಿದರು. ಶಿವಗಂಗಾ ಯೋಗ ಕೇಂದ್ರದ ಮಾಜಿ ಕಾರ್ಯದರ್ಶಿಎಸ್. ಎಸ್ . ಜ್ಯೋತಿ ಪ್ರಕಾಶ ಅವರು ಮಾತನಾಡುತ್ತಾ ಶಿವಗಂಗಾ ಯೋಗ ಕೇಂದ್ರ ನಮ್ಮ ನಾಡಿಗೆ ಒಂದು ವಿಶೇಷವಾದ ಕೊಡುಗೆಯನ್ನು ನೀಡಿದೆ ಶಿವಮೊಗ್ಗದಲ್ಲಿ ಸಾಕಷ್ಟು ಜನ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗಭ್ಯಾಸ ನಡೆಸುತ್ತಿರುವುದು ತುಂಬಾ ವಿಶೇಷವಾಗಿದೆ ರಾಜ್ಯಕ್ಕೆ ಒಂದು ಮಾದರಿ ಸಂಸ್ಥೆಯಾಗಿದೆ. ಪ್ರತಿಯೊಬ್ಬರೂ ನಿರಂತರವಾಗಿ ಶಾಖೆಗೆ ತಪ್ಪದೇ ಬಂದು ಯೋಗಭ್ಯಾಸ ಮಾಡಬೇಕೆಂದು ನುಡಿದರು. Shivaganga Yoga Center ರಾಘವ ಶಾಖೆಯ ಮುಖ್ಯ ಶಿಕ್ಷಕರಾದ ಜಿ ಎಸ್ ಓಂಕಾರ್ ಅವರು ಇಂದಿನ ಒತ್ತಡದ ಪರಿಸ್ಥಿತಿಯಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಯೋಗ, ಪ್ರಾಣಾಯಾಮ ಹಾಗೂ ಧ್ಯಾನದ ಅವಶ್ಯಕತೆಯನ್ನು ತಿಳಿಹೇಳಿದರು. ಯೋಗ ಶಿಕ್ಷಕರಾದ ವಿಜಯ ಕೃಷ್ಣ. ಎಚ್ ಕೆ ಹರೀಶ್. ಜಿ ವಿಜಯಕುಮಾರ್. ಶಂಕರ್, ಸುಜಾತಾ..ಗಾಯತ್ರಿ ಲತಾ. ಶೈಲಾ. ಶೋಭಾ.. ಶ್ರೀನಿವಾಸ್. ಸುಬ್ರಮಣ್ಯ. . ಹಾಗೂ ಯೋಗ ಬಂದು ಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...