Friday, March 27, 2026
Friday, March 27, 2026

Subbaiah Medical College ವೈದ್ಯರು ಸದೃಢ ಆರೋಗ್ಯ ಕಾಪಾಡಿಕೊಂಡರೆ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ- ಡಾ.ಸಿ.ಆರ್.ಚಂದ್ರಶೇಖರ್

Date:

Subbaiah Medical College ವೈದ್ಯ ವೃತ್ತಿಯಲ್ಲಿ ಇರುವವರು ಸಹ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆ ಸಮಾನವಾಗಿ ಗಮನ ಹರಿಸುವುದು ಅವಶ್ಯಕ ಎಂದು ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ್ ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಘಟಕದ ವತಿಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಆರೋಗ್ಯ ನಿರ್ವಹಣೆ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ವೈದ್ಯರು ಸದೃಢ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಒತ್ತಡ ನಿರ್ವಹಣೆ, ಜೀವನಶೈಲಿ ಬದಲಾವಣೆಗಳು ಮತ್ತು ಸಮತೋಲನ ಜೀವನ ನಡೆಸಬೇಕು ಎಂದು ಉಪಯುಕ್ತ ಸಲಹೆಗಳನ್ನು ನೀಡಿದರು.

ವೈದ್ಯರು ಸೋಂಕು ರೋಗಗಳು, ಪೋಷಕಾಂಶ ಕೊರತೆ, ಒತ್ತಡ, ಖಿನ್ನತೆ, ಆತಂಕ, ಹೃದಯ ಹಾಗೂ ರಕ್ತನಾಳ ಸಂಬಂಧಿತ ಕಾಯಿಲೆಗಳು, ಸ್ಟ್ರೋಕ್, ಮಧುಮೇಹ, ಕ್ಯಾನ್ಸರ್, ವ್ಯಸನಗಳು ಮುಂತಾದ ಅನೇಕ ಸಮಸ್ಯೆಗಳಿಗೆ ಹೆಚ್ಚು ಒಳಗಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ ಎಂದು ಹೇಳುವಾಗ ವೈದ್ಯೋ ನಾರಾಯಣ ಹರಿ” ಎಂಬ ಉನ್ನತ ಸ್ಥಾನಮಾನ ಸಮಾಜದಲ್ಲಿ ವೈದ್ಯರಿಗೆ ಮಾತ್ರ ಇದೆ. ಪ್ರತಿಯೊಬ್ಬರೂ ಸೇವಾ ಮನೋಭಾವ ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವೈದ್ಯರಾಗಿ ಎದುರಿಸಬೇಕಾದ ವೃತ್ತಿಪರ ಹಾಗೂ ವೈಯಕ್ತಿಕ ಸವಾಲುಗಳು ಮತ್ತು ಅವಕ್ಕೆ ಬೇಕಾದ ಮಾನಸಿಕ-ದೈಹಿಕ ಸಿದ್ಧತೆ ಕುರಿತು ವಿವರಿಸಿದರು.

Subbaiah Medical College ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಘಟಕದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಡಾ. ವಿನಾಯಕ ಜಿ, ಡಾ. ಸಿದ್ಧಲಿಂಗಪ್ಪ, ಡಾ. ಬಿ.ಎಸ್. ಸುರೇಶ್, ಡಾ. ವಿನಯಾ ಶ್ರೀನಿವಾಸ್, ಡಾ. ಕೌಸ್ತುಭ ಅರುಣ್, ಡಾ. ವಿ.ಎಲ್.ಎಸ್. ಕುಮಾರ್, ಡಾ. ಶೀಲಾ ವಿಜಯ್, ಡಾ. ವಿಜಯಾನಂದ್, ಡಾ. ಪದ್ಮೇಗೌಡ, ಶ್ರೇಯಸ್ ಸೇರಿದಂತೆ ಹಲವು ಗಣ್ಯ ವೈದ್ಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...