Wednesday, August 26, 2026
Wednesday, August 26, 2026

Shivamogga News ಬಲಿಷ್ಢ ವ್ಯವಹಾರ ಮತ್ತು ಬಲಿಷ್ಢ ಕುಟುಂಬ ಇದ್ದಾಗಲೇ ಸಂತೋಷ ಲಭ್ಯ- ಬಿ.ಗೋಪಿನಾಥ್

Date:

Shivamogga News ಕುಟುಂಬವು ನಮಗೆ ಭಾವನಾತ್ಮಕ ಶಕ್ತಿ ಹಾಗೂ ಬೆಂಬಲ ನೀಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದಿಂದ ಆಯೋಜಿಸಿದ್ದ ವಿತರಕರ ದಿನಾಚರಣೆ ಮತ್ತು ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಬಲಿಷ್ಠ ವ್ಯವಹಾರ ಸಂಪತ್ತು ನಿರ್ಮಿಸುತ್ತದೆ. ಬಲಿಷ್ಠ ಕುಟುಂಬ ಸುಂದರ ಜೀವನ ನಿರ್ಮಿಸುತ್ತದೆ. ಎರಡರ ನಡುವೆ ಸಮತೋಲನ ಇದ್ದಾಗ ಸಂತೋಷ ಸ್ವಾಭಾವಿಕವಾಗಿ ದೊರೆಯುತ್ತದೆ. ವ್ಯವಹಾರ ನಮಗೆ ಉದ್ದೇಶ, ಗೌರವ ಹಾಗೂ ಆರ್ಥಿಕ ಭದ್ರತೆ ನೀಡುತ್ತದೆ. ಸಂತೋಷ ಎಂದರೆ ಸಾಧನೆಗಳು ಮಾತ್ರವಲ್ಲ. ಮನಸ್ಸಿನ ಶಾಂತಿಯಲ್ಲಿ ದೊರಕುವ ಅನುಭವ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ ಎಂ ಸಿ ಮಾತನಾಡಿ, ವಿತರಕರ ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ವಿತರಕರ ಸಂಘವು ವಿತರಕರ ಕುಟುಂಬ ಮಿಲನ ಕಾರ್ಯಕ್ರಮ ಆಯೋಜಿಸಿದೆ. ಮುಂಬರುವ ದಿನಗಳಲ್ಲಿ ವಿಭಿನ್ನ ರೀತಿ ಕಾರ್ಯಕ್ರಮಗಳನ್ನು ನೀಡುತ್ತೇವೆ ಎಂದು ಹೇಳಿದರು.

ಲೆಕ್ಕ ಪರಿಶೋಧಕ ಗೌರೀಶ್ ಭಾರ್ಗವ್ ಕೆ ವಿ ಮಾತನಾಡಿ, ಸಾಂಪ್ರದಾಯಕ ವ್ಯವಹಾರ ಪದ್ಧತಿಯ ಜೊತೆಗೆ ಆಧುನಿಕ ಸ್ಪರ್ಶತೆ ನೀಡಿ ವ್ಯವಹಾರ ಮಾಡಿದ್ದಲ್ಲಿ ಯಾವುದೇ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮದೇ ಆದ ಛಾಪು ಮೂಡಿಸಬಹುದು ಎಂದು ತಿಳಿಸಿದರು.

ಕೆಸಿಪಿಡಿಎಫ್ ಅಧ್ಯಕ್ಷ ಗಿರೀಶ್ ಸುಂಕದ ಮಾತನಾಡಿ, ಕುಟುಂಬ ಮಿಲನದಂತಹ ಕಾರ್ಯಕ್ರಮಗಳು ನಮ್ಮ ಸಂಘಟನೆಗಳನ್ನು ಸದೃಢಗೊಳಿಸುತ್ತವೆ. ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದ ಸಂಘಟನೆಗಳ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.

Shivamogga News ಕೆಎಫ್‌ಡಬ್ಲ್ಯೂಡಿಎ ಅಧ್ಯಕ್ಷ ಜಯಂತ್ ಗಾಣಿಗ್ ಮಾತನಾಡಿ, ಸರ್ಕಾರಗಳಿಗೆ ತೆರಿಗೆ ನೀಡಿ ತೆರಿಗೆ ಶೇಖರಿಸಿ ಕೊಡುವಲ್ಲಿ ಸರ್ಕಾರದ ಆದಾಯದ ಮೂಲದಲ್ಲಿ ನಾವು ಕೂಡ ಪ್ರಮುಖ ಭಾಗಿಯಾಗಿದ್ದೇವೆ. ಸರ್ಕಾರದಿಂದ ನಮಗೂ ಕೂಡ ಸೌಲಭ್ಯಗಳು ದೊರೆಯಬೇಕು ಎಂದು ತಿಳಿಸಿದರು.

ವಿತರಕರ ಸಂಘದ ಗೌರವ ಕಾರ್ಯದರ್ಶಿ ಶ್ರೀನಿವಾಸ್ ಕೆಎಸ್, ಉಪಾಧ್ಯಕ್ಷ ಬದರಿನಾಥ್ ಬಿ ಆರ್, ಕಾರ್ಯದರ್ಶಿ ಗಿರೀಶ್ ಒಡೆಯರ್, ಸಹಕಾರ್ಯದರ್ಶಿ ಅರವಿಂದ ಎಸ್ ವಿ, ಖಜಾಂಚಿ ಚಂದ್ರಶೇಖರ್ ಕೆ ಕೆ, ನಿಕಟಪೂರ್ವ ಅಧ್ಯಕ್ಷ ಶಿವರಾಜ್ ಉಡುಗಣಿ, ಮಾಜಿ ಅಧ್ಯಕ್ಷ ಪ್ರಕಾಶ್ ಎಎನ್, ನಿರ್ದೇಶಕರಾದ ಮೋಹನ್ ಕುಮಾರ್ ಕೆಎಸ್, ಸುರೇಂದ್ರನಾಥ್, ಕುಮಾರ್, ರಾಘವೇಂದ್ರ, ಬಿ ವೈ ನವೀನ್ ಜವಳಿ, ಮಹಾರುದ್ರಪ್ಪ ಕೆ ವಿ, ಮಹಮದ್ ಇಕ್ಬಾಲ್, ವೆಂಕಟೇಶ್ ಕೆ ಎಮ್, ಚೇತನ್ ಕುಮಾರ್ ಹಾಗೂ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...