Shivamogga Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ಸ್ವಾತಂತ್ರ್ಯದ ಓಟ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಆಸಕ್ತ ರಂಗ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿದ ಕಲಾವಿದರಿಗೆ ಫೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆವರೆಗೆ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ.
Shivamogga Rangayana ಅರ್ಜಿ ಸಲ್ಲಿಸಿರುವ ಕಲಾವಿದರು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯದಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ. ಸಿ. ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353 ನ್ನು ಸಂಪರ್ಕಿಸುವುದು.
