Tuesday, August 25, 2026
Tuesday, August 25, 2026

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

Date:

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅತ್ಯಂತ ಪೂರಕವಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ ಎಸ್ ಸಂತೋಷ್ ಹೇಳಿದರು.

ರಂಗಾಯಣ ಶಿವಮೊಗ್ಗ ರೆಪರ್ಟರಿ ಕಲಾವಿದರು ಬುಧವಾರದಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಪ್ರದರ್ಶಿಸಿದ ಡಾ. ಡಿ. ಎಸ್. ಚೌಗಲೆ ರಚನೆಯ ಮತ್ತು ಚಿದಂಬರರಾವ್ ಜಂಬೆ ನಿರ್ದೇಶನದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಮೂಲ ಶಿಕ್ಷಣದ ಪರಿಕಲ್ಪನೆ, ಅಸ್ಪೃಶ್ಯತಾ ನಿವಾರಣೆ, ಮಾನವೀಯ ಧರ್ಮ ಮುಂತಾದ ಚಿಂತನೆಗಳು ಸಮಾಜ ನಿರ್ಮಾಣಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

M.S.Santosh ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ ಸಿ ಮಾತನಾಡಿ, ರಂಗಾಯಣದ ವತಿಯಿಂದ ಪ್ರತಿ ವರ್ಷ ಆಯ್ದ ಮೂರು ನಾಟಕಗಳನ್ನು ರಾಜ್ಯದ ವಿವಿಧ ಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. ಈ ವರ್ಷ ನನ್ನೊಳಗೊಬ್ಬ ಗಾಂಧಿ ನಾಟಕವನ್ನು ರಂಗಕರ್ಮಿ ಚಿದಂಬರರಾವ್ ಜಂಬೆ ನಿರ್ದೇಶನದಲ್ಲಿ ರಿಪರ್ಟರಿ ಕಲಾವಿದರು ಅಭಿನಯಿಸುತ್ತಿದ್ದು, 30ನೇ ಪ್ರದರ್ಶನವನ್ನು ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.

ರಂಗಾಯಣ ವತಿಯಿಂದ ಜೈಲಿನ ಬಂಧಿವಾಸಿಗಳಿಗೆ ನಾಟಕ ತರಬೇತಿ ನೀಡಿ ಪ್ರದರ್ಶನ ಏರ್ಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾದ ಡಾ. ಪಿ. ರಂಗನಾಥ್, ಐ ಎ ಎಸ್ ಅಧಿಕಾರಿಗಳಾದ ನಾಗೇಂದ್ರರಾವ್, ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಪರಮೇಶ್ವರಪ್ಪ, ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಭವ್ಯ, ಸಹಾಯಕ ಅಧೀಕ್ಷಕಿ ಪ್ರೀತಿ, ಕೇಂದ್ರ ಕಾರಾಗೃಹದ ಶಿಕ್ಷಕ ಗೋಪಾಲಕೃಷ್ಣ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...