Thursday, February 5, 2026
Thursday, February 5, 2026

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Date:

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ.
ದೂರುದಾರರಾದ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ ರತ್ನಮ್ಮ ಇವರ ಮಗ ಮಂಜುನಾಥ ಲೈಲ್ಯಾಂಡ್ ವಾಹನಕದ ಮಾಲೀಕರಾಗಿದ್ದು ಎದುರುದಾರ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರ ಬಳಿ ವಿಮೆಯನ್ನು ಪಡೆದಿದ್ದು ವಿಮೆಯು ದಿ: 28-04-2023 ರಿಂದ 27-04-2024 ರವರೆಗೆ ಚಾಲ್ತಿಯಲ್ಲಿರುತ್ತದೆ. ಮಂಜುನಾಥರವರು ದಿ: 28-10-2023 ರಂದು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿ ತೀವ್ರ ಸ್ವರೂಪದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದುತ್ತಾರೆ. ವಾಹನ ಅಪಘಾತದ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ.
ದೂರುದಾರರ ಮಗ ಮಂಜುನಾಥನವರ ನಿಧನದಿಂದಾಗಿ ಎದುರುದಾರರ ಬಳಿ ವೈಯಕ್ತಿಕ ಅಪಘಾತ ವಿಮಾ ಮೊತ್ತ ರೂ.15,00,000/- ಗಳನ್ನು ನೀಡಲು ಸಂಬAಧಿಸಿದ ದಾಖಲೆಗಳನ್ನು ಸಲ್ಲಿಸಿದಾಗ, ವಿಮಾ ಮೊತ್ತವನ್ನು ಕೊಡುವುದಾಗಿ ಭರವಸೆ ನೀಡಿದ್ದರು. ನಂತರ ವಿಮಾ ಮೊತ್ತ ನೀಡದೇ ಇರುವುದರಿಂದ ಲೀಗಲ್ ನೋಟಿಸ್ ನೀಡಲಾಗುತ್ತದೆ. ಆದರೆ ಎದುರುದಾರರು ಯಾವುದೇ ಪ್ರತ್ಯುತ್ತರ ಅಥವಾ ವಿಮಾ ಮೊತ್ತ ನೀಡದೇ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ದೂರುದಾರರು ಆಯೋಗದ ಮುಂದೆ ದೂರು ಸಲ್ಲಿಸಲಾಗುತ್ತದೆ.
Shimoga News ಆಯೋಗವು ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಎದುರುದಾರರು ದೂರುದಾರರಿಗೆ ವೈಯಕ್ತಿಕ ಅಪಘಾತ ವಿಮಾ ಪರಿಹಾರವನ್ನು ನಿಗದಿತ ಅವಧಿಯಲ್ಲಿ ಪಾವತಿಸದೇ ಸೇವಾ ನ್ಯೂನ್ಯತೆ ಎಸಗಿರುತ್ತಾರೆಂದು ತೀರ್ಮಾನಿಸಿ, ದೂರುದಾರರಿಗೆ ವೈಯಕ್ತಿಕ ಅಪಘಾತ ವಿಮಾ ಮೊತ್ತ ರೂ. ರೂ.15,00,000/- ಗಳನ್ನು ದಿ: 24-02-2025 ರಿಂದ ವಾರ್ಷಿಕ ಶೇ.7 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸಲು, ತಪ್ಪಿದಲ್ಲಿ ವಾರ್ಷಿಕ ಶೇ.9 ರ ಬಡ್ಡಿಯೊಂದಿಗೆ ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಹಾಗೂ ರೂ.35,000 ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಪಾವತಿಸತಕ್ಕದೆಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಘೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರ ಪೀಠವು ಜ.30 ರಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...

Hole Honnur Police Station ಕಳೆದ ಮೊಬೈಲ್ ಪತ್ತೆ.ಮಾಲೀಕರಿಗೆ ವಾಪಸ್ ನೀಡಿದ ಪೊಲೀಸ್ ಇಲಾಖೆ.

Hole Honnur Police Station ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ...