Friday, May 15, 2026
Friday, May 15, 2026

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Date:

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ.
ದೂರುದಾರರಾದ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ ರತ್ನಮ್ಮ ಇವರ ಮಗ ಮಂಜುನಾಥ ಲೈಲ್ಯಾಂಡ್ ವಾಹನಕದ ಮಾಲೀಕರಾಗಿದ್ದು ಎದುರುದಾರ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರ ಬಳಿ ವಿಮೆಯನ್ನು ಪಡೆದಿದ್ದು ವಿಮೆಯು ದಿ: 28-04-2023 ರಿಂದ 27-04-2024 ರವರೆಗೆ ಚಾಲ್ತಿಯಲ್ಲಿರುತ್ತದೆ. ಮಂಜುನಾಥರವರು ದಿ: 28-10-2023 ರಂದು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿ ತೀವ್ರ ಸ್ವರೂಪದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದುತ್ತಾರೆ. ವಾಹನ ಅಪಘಾತದ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ.
ದೂರುದಾರರ ಮಗ ಮಂಜುನಾಥನವರ ನಿಧನದಿಂದಾಗಿ ಎದುರುದಾರರ ಬಳಿ ವೈಯಕ್ತಿಕ ಅಪಘಾತ ವಿಮಾ ಮೊತ್ತ ರೂ.15,00,000/- ಗಳನ್ನು ನೀಡಲು ಸಂಬAಧಿಸಿದ ದಾಖಲೆಗಳನ್ನು ಸಲ್ಲಿಸಿದಾಗ, ವಿಮಾ ಮೊತ್ತವನ್ನು ಕೊಡುವುದಾಗಿ ಭರವಸೆ ನೀಡಿದ್ದರು. ನಂತರ ವಿಮಾ ಮೊತ್ತ ನೀಡದೇ ಇರುವುದರಿಂದ ಲೀಗಲ್ ನೋಟಿಸ್ ನೀಡಲಾಗುತ್ತದೆ. ಆದರೆ ಎದುರುದಾರರು ಯಾವುದೇ ಪ್ರತ್ಯುತ್ತರ ಅಥವಾ ವಿಮಾ ಮೊತ್ತ ನೀಡದೇ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ದೂರುದಾರರು ಆಯೋಗದ ಮುಂದೆ ದೂರು ಸಲ್ಲಿಸಲಾಗುತ್ತದೆ.
Shimoga News ಆಯೋಗವು ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಎದುರುದಾರರು ದೂರುದಾರರಿಗೆ ವೈಯಕ್ತಿಕ ಅಪಘಾತ ವಿಮಾ ಪರಿಹಾರವನ್ನು ನಿಗದಿತ ಅವಧಿಯಲ್ಲಿ ಪಾವತಿಸದೇ ಸೇವಾ ನ್ಯೂನ್ಯತೆ ಎಸಗಿರುತ್ತಾರೆಂದು ತೀರ್ಮಾನಿಸಿ, ದೂರುದಾರರಿಗೆ ವೈಯಕ್ತಿಕ ಅಪಘಾತ ವಿಮಾ ಮೊತ್ತ ರೂ. ರೂ.15,00,000/- ಗಳನ್ನು ದಿ: 24-02-2025 ರಿಂದ ವಾರ್ಷಿಕ ಶೇ.7 ರಂತೆ ಬಡ್ಡಿ ಸೇರಿಸಿ, ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸಲು, ತಪ್ಪಿದಲ್ಲಿ ವಾರ್ಷಿಕ ಶೇ.9 ರ ಬಡ್ಡಿಯೊಂದಿಗೆ ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಹಾಗೂ ರೂ.35,000 ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಪಾವತಿಸತಕ್ಕದೆಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಘೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರ ಪೀಠವು ಜ.30 ರಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...

K.S. Eshwarappa “ಮಾರ್ನಾಮಿ ಬೈಲ್” ಕಿರುಚಿತ್ರೋತ್ಸವ ಒಂದು ಸಾಂಸ್ಕೃತಿಕ ಹೆಜ್ಜೆ,- ಕೆ.ಎಸ್.ಈಶ್ವರಪ್ಪ

K.S. Eshwarappa ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಗಾರಾ ಗ್ರೂಪ್...

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...