Friday, February 6, 2026
Friday, February 6, 2026

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Date:

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ 05.02.2026 ರಂದು ತಾಲೂಕಿನ 10 ಮಂದಿ ಮಾಶಾಸನ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು.

ಪೂಜ್ಯ ಡಾ. ಡಿ ವೀರೇಂದ್ರಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಆಶಯದಂತೆ ಪ್ರತೀ ತಿಂಗಳು 59 ಮಂದಿ ನಿರ್ಗತಿಕರಿಗೆ ರೂ.1000/- ಮಾಶಾಸನ ನೀಡಲಾಗುತ್ತಿದೆ. ಅಲ್ಲದೇ ಪ್ರತೀ ವರ್ಷದಂತೆ ಕಡು ಬಡವರಿಗೆ ವಾತ್ಸಲ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಿಟ್ ನಲ್ಲಿ ದಿನ ಬಳಕೆಗೆ ಅಗತ್ಯ ವಸ್ತುಗಳಾದ ಚಾಪೆ, ದಿಂಬು, ಬೆಡ್ ಶೀಟ್ ಗಳು, ಟವಲ್, ಸೀರೆ, ಲಂಗ, ನೈಟಿ, ಪಂಚೆ, ಶರ್ಟ್, ಬರ್ಮುಡಾ, ಸೋಪು, ಬಚಾಣಿಕೆ ಮುಂತಾದ ವಸ್ತುಗಳನ್ನು ನೀಡಲಾಗಿದೆ.

Dharmasthala Rural Development Project ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ನ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಮುರುಳಿಧರ್ ಶೆಟ್ಟಿ, ಜಿಲ್ಲಾ ಎಂ.ಐ.ಎಸ್ ಯೋಜನಾಧಿಕಾರಿಗಳಾದ ಶ್ರೀಯುತ ಬಾಲಕೃಷ್ಣ ನಾಯ್ಕ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ, ವಲಯಗಳ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು, ವಲಯಗಳ ಒಕ್ಕೂಟ ಪದಾಧಿಕಾರಿಗಳು, ಊರಿನ ಗಣ್ಯರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...

Samanvaya Trust ಉಚಿತ ವಾಚನಾಲಯ ದ ಪ್ರಯೋಜನ ಪಡೆದು ಉನ್ನತ ಹುದ್ದೆಗೆ ಆಯ್ಕೆಯಾದ ರಾಜಶೇಖರ್ ಗೆ ಸನ್ಮಾನ

Samanvaya Trust ಸಮನ್ವಯ ಟ್ರಸ್ಟ್ ನ ಕೆ.ಎ.ದಯಾನಂದ ಐಎಎಸ್ ವಾಚನಾಲಯದಲ್ಲಿ ಅಧ್ಯಯನ...