Sunday, August 2, 2026
Sunday, August 2, 2026

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Date:

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆ. 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಕಾಯಕ ಶರಣರ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
Department of Kannada and Culture ಜಿಲ್ಲೆಯ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿ.ಪಂ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಶಂಕರಘಟ್ಟ ಸಾಹಿತಿಗಳಾದ ಡಾ. ಬಸವರಾಜ್ ನೆಲ್ಲಿಸರ ರವರಿಂದ ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...