Wednesday, August 26, 2026
Wednesday, August 26, 2026

Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”

Date:

Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ ಫೆಬ್ರವರಿ 15ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಕಾಶಿ ವಿಶ್ವನಾಥ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು, ಪ್ರದಕ್ಷಿಣೆ ಲಿಂಗು ದರ್ಶನ, ಸಹಸ್ರಲಿಂಗ ದರ್ಶನ, ಸ್ವಪರಿವರ್ತನೆ ಮಂಟಪ, ಆಧ್ಯಾತ್ಮ ಚಿತ್ರ ಪ್ರದರ್ಶನದಿಂದ ಮೌಲ್ಯ ಜಾಗೃತಿ, ಕಮಲೋದ್ಭವ ಲಿಂಗು ದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದೆ.
ಸಂಜೆ 6ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾಜಯೋಗ ಶಿಕ್ಷಕಿ ಬ್ರಹ್ಮಕುಮಾರಿ ಸ್ವಾತಿ ಮಹಾಶಿವರಾತ್ರಿ ಸಂದೇಶ ನೀಡುವರು.
Mahashivratri ಸಂಜೆ 7ರಿಂದ ಗೌರವಾರ್ಪಣಾ ಮಹೋತ್ಸವ ನಡೆಯಲಿದ್ದು, ರಾತ್ರಿ 8ರಿಂದ ಸಾಂಸ್ಕೃತಿಕ ಮಹೋತ್ಸವ ನಡೆಯಲಿದೆ. ಶ್ರೀ ಗೌರಿ ಕಲಾಕೇಂದ್ರದ ತಂಡದಿAದ ಶಿವನ ನೃತ್ಯ ಕಾರ್ಯಕ್ರಮ ಇರಲಿದೆ. ಅಂಚೆ ಇಲಾಖೆಯ ಪೋಸ್ಟ್ ಮ್ಯಾನ್ ಮತ್ತು ಎಂಟಿಎಸ್ ವರ್ಗದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...