Thursday, September 10, 2026
Thursday, September 10, 2026

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Date:

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 14ರಂದು ಶನಿವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಫೆರೋಕಾಸ್ಟ್ ಸಭಾಂಗಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 14ರಂದು ಬೆಳಗ್ಗೆ 10ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಶಿಬಿರ ಉದ್ಘಾಟಿಸುವರು. ಜನನಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ್ ಪಾದೇಕಲ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಕುಮಾರ್ ಬಿ.ಎನ್, ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು.
ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿರುತ್ತವೆ.
Rotary Club Shimoga ಬೆನ್ನುನೋವು, ಕೀಲುನೋವು, ಅಧಿಕ ರಕ್ತದ ಒತ್ತಡ, ಬೊಜ್ಜು, ಮಧುಮೇಹ, ಹೈಪರ್‌ಟೆನ್ಷನ್, ಥೈರಾಯ್ಡ್ ತೊಂದರೆ, ಗ್ಯಾಸ್ಟ್ರೈಟೀಸ್, ಮೈಗ್ರೇನ್, ನಿದ್ರಾಹೀನತೆ, ಉದ್ವಿಗ್ನತೆ, ಪಾಶ್ರ‍್ವವಾಯು, ಸ್ಪಾಂಡಿಲೈಟಿಸ್ ಮತ್ತಿತರ ಸಮಸ್ಯೆಗಳಿಂದ ಬಳಲುವವರು ಶಿಬಿರದ ಪ್ರಯೋಜನ ಪಡೆಯಬಹುದು. ವಿವರಗಳಿಗೆ ಮೊಬೈಲ್ ಸಂಖ್ಯೆ 9448105198 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...